ಕರ್ನಾಟಕ ರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ: ನ. 1 ರಂದು ಎಲ್ಲಾ ಸರ್ಕಾರಿ ನೌಕರರು ಕಡ್ಡಾಯವಾಗಿ ಹಾಜರಾಗಲು ಜಿಲ್ಲಾಧಿಕಾರಿಗಳ ಸೂಚನೆ
ಧಾರವಾಡ (ಅ. 31): ಕರ್ನಾಟಕ ರಾಜ್ಯೋತ್ಸವ ದಿನಾಚರಣೆ–2025 ಕಾರ್ಯಕ್ರಮವನ್ನು ನವೆಂಬರ್ 1 ರಂದು ಧಾರವಾಡ ನಗರದ ಆರ್. ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸುತ್ತೋಲೆ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ಸೂಚಿಸಿದ್ದಾರೆ. ಹಾಜರಾತಿ ಕಡ್ಡಾಯ: ಶಿಸ್ತು ಕ್ರಮದ ಎಚ್ಚರಿಕೆನವೆಂಬರ್ 1, 2025 ರಂದು ಬೆಳಿಗ್ಗೆ 9 ಗಂಟೆಗೆ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಆರ್….

