ಧಾರವಾಡದಲ್ಲಿ ಜೂ.14ರಂದು 4ನೇ ವಲಯ ಕಾನೂನು ಕಾರ್ಯಾಗಾರ: 6 ಜಿಲ್ಲೆಗಳ 1,200ಕ್ಕೂ ಅಧಿಕ ವಿದ್ಯಾರ್ಥಿಗಳ ಭಾಗವಹಿಸುವಿಕೆಗೆ ಸಜ್ಜು

ಧಾರವಾಡ, ಜೂ.12: ಕಾನೂನು ವಿದ್ಯಾರ್ಥಿಗಳಿಗೆ ನ್ಯಾಯಾಂಗ ವ್ಯವಸ್ಥೆ, ಕಾನೂನು ಸೇವಾ ಪ್ರಾಧಿಕಾರದ ಕಾರ್ಯಚಟುವಟಿಕೆಗಳು ಹಾಗೂ ಕಾನೂನು ಶಿಕ್ಷಣದ ಪ್ರಾಯೋಗಿಕ ಅಂಶಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ “ಫ್ರಾಮ್ ಕ್ಲಾಸ್ ರೂಮ್ ಟು ಕೋರ್ಟ್ ರೂಮ್” ವಿಷಯದಡಿ 4ನೇ ವಲಯ ಕಾರ್ಯಾಗಾರವನ್ನು ಜೂನ್ 14ರಂದು ಧಾರವಾಡದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್.ವಿ. ವಿಜಯ ತಿಳಿಸಿದ್ದಾರೆ. ಗುರುವಾರ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

Read More

ಪ್ರತಿ ಮಗುವಿಗೂ ಶಿಕ್ಷಣ ಪಡೆಯುವ ಹಕ್ಕು ಇದೆ: ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ.

ಧಾರವಾಡ, ಜೂ.12: 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯೋಗಕ್ಕೆ ನೇಮಿಸುವುದು ಕಾನೂನುಬಾಹಿರವಾಗಿದ್ದು, ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಪಡೆಯುವ ಹಕ್ಕು ಇದೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು. ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಗುರುವಾರ ಧಾರವಾಡದ ರಾಮನಗರದಲ್ಲಿರುವ ಆದರ್ಶ ಬಾಲಿಕಾ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ…

Read More

ಕಾರ್ಮಿಕರಿಗೆ ಮೂಲ ಸೌಕರ್ಯ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು: ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು

ಧಾರವಾಡ, ಜೂ.11: ಸ್ವಚ್ಛತಾ ಕಾರ್ಮಿಕರು ಮತ್ತು ಪೌರಕಾರ್ಮಿಕರಿಗೆ ವೇತನ, ಇಎಸ್‌ಐ, ಪಿಎಫ್, ಆರೋಗ್ಯ ವಿಮೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಸೂಚಿಸಿದರು. ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು ಹಾಗೂ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು ಮತ್ತು ಪೌರಕಾರ್ಮಿಕರೊಂದಿಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಸಂವಾದ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ…

Read More

ಗ್ರಾಮೀಣಾಭಿವೃದ್ಧಿಗೆ ಅಧಿಕಾರಿ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಿ:-ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ ವಿ.

ಧಾರವಾಡ, ಜೂ.11: ನಗರಗಳ ಅಭಿವೃದ್ಧಿಯೊಂದಿಗೆ ಗ್ರಾಮಗಳ ಸಮಗ್ರ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಬೇಕು. ಗ್ರಾಮೀಣಾಭಿವೃದ್ಧಿಗೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಹಾಗೂ ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ ವಿ. ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಗುರುವಾರ ನಡೆದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮಗಳ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿಯಾಗಿದ್ದು, ಜಿಲ್ಲೆಯ ಪ್ರತಿಯೊಂದು ಗ್ರಾಮದ ಸಮಗ್ರ ಬೆಳವಣಿಗೆಗೆ…

Read More

ಜಿಟಿಟಿಸಿಯಲ್ಲಿ 2026-27ನೇ ಸಾಲಿನ ಕೌಶಲ್ಯ ಆಧಾರಿತ ಡಿಪ್ಲೊಮಾ ತರಗತಿಗಳಿಗೆ ಚಾಲನೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಧಾರವಾಡ, ಜೂ.11: ಧಾರವಾಡದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ದಲ್ಲಿ 2026-27ನೇ ಸಾಲಿನ ಕೌಶಲ್ಯ ಆಧಾರಿತ ಡಿಪ್ಲೊಮಾ ತರಗತಿಗಳಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತವು ವಿಶ್ವದ ಅತಿ ಹೆಚ್ಚು ಯುವಜನಸಂಖ್ಯೆ ಹೊಂದಿರುವ ದೇಶವಾಗಿದ್ದು, ಯುವಕರು ಕೌಶಲ್ಯ ಆಧಾರಿತ ತರಬೇತಿ ಹಾಗೂ ಡಿಪ್ಲೊಮಾ ಶಿಕ್ಷಣ ಪಡೆಯುವುದರಿಂದ ಜಾಗತಿಕ ಮಟ್ಟದ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆದು ಆರ್ಥಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು. ವಿದ್ಯಾರ್ಥಿಗಳು ಶೈಕ್ಷಣಿಕ ಜ್ಞಾನಕ್ಕೆ ಮಾತ್ರ ಸೀಮಿತವಾಗದೇ…

Read More

ನಾಗರಿಕಸ್ನೇಹಿ ಆಡಳಿತಕ್ಕೆ ಆದ್ಯತೆ ನೀಡಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ

ಧಾರವಾಡ, ಜೂ.11: ಸಾರ್ವಜನಿಕರಿಗೆ ವಿವಿಧ ಇಲಾಖೆಗಳ ಯೋಜನೆಗಳ ಬಗ್ಗೆ ಸಮರ್ಪಕ ಮಾಹಿತಿ ಒದಗಿಸುವ ಮೂಲಕ ನಾಗರಿಕಸ್ನೇಹಿ ಆಡಳಿತಕ್ಕೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ ವಿ. ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ 2026ರ ಮುಂಗಾರು ಪರಿಸ್ಥಿತಿಯನ್ನು ಎದುರಿಸಲು ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೈಗೊಳ್ಳಬೇಕಾದ ಪೂರ್ವಸಿದ್ಧತಾ ಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು….

Read More

ಧಾರವಾಡ ಜಿಲ್ಲೆಯಲ್ಲಿ ರೌಡಿ ಶೀಟರ್‌ಗಳ ಮನೆಗಳ ಮೇಲೆ ಪೊಲೀಸ್ ಪರಿಶೀಲನೆ: 47 ಮಂದಿಗೆ ಎಚ್ಚರಿಕೆ

ಧಾರವಾಡ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ರೌಡಿ ಸ್ಕ್ವಾಡ್ ವತಿಯಿಂದ ಬುಧವಾರ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್‌ಗಳ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಧಾರವಾಡ ಗ್ರಾಮೀಣ ಉಪವಿಭಾಗದ ಡಿ.ಎಸ್.ಪಿ., ಸಿ.ಪಿ.ಐ., ಪಿ.ಐ., ಪಿ.ಎಸ್.ಐ. ಹಾಗೂ ಪೊಲೀಸ್ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಪರಿಶೀಲನೆ ವೇಳೆ ರೌಡಿ ಶೀಟರ್‌ಗಳ ಮನೆಗಳಲ್ಲಿ ಮಾರಕಾಸ್ತ್ರಗಳು ಸೇರಿದಂತೆ ಅನುಮಾನಾಸ್ಪದ ವಸ್ತುಗಳಿಗಾಗಿ ತಪಾಸಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಧಾರವಾಡ ಗ್ರಾಮೀಣ…

Read More

ಧಾರವಾಡ ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಸಾಧ್ಯತೆ; ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮನವಿ

ಧಾರವಾಡ, ಜೂ. 8: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳವರೆಗೆ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಹಾಗೂ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳ ಅಚ್ಚುಕಟ್ಟು ಪ್ರದೇಶಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹದ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮನವಿ ಮಾಡಿದ್ದಾರೆ. ಈ ಕುರಿತು…

Read More

ಧಾರವಾಡದಲ್ಲಿ ಲೋಕಾಯುಕ್ತ ಭಾರಿ ಬೇಟೆ: ಸಣ್ಣ ನೀರಾವರಿ ಇಲಾಖೆ ಇ.ಇ ಸೇರಿ ಮೂವರ ಕಚೇರಿಗಳ ಮೇಲೆ ದಾಳಿ, ದಾಖಲೆ ಜಪ್ತಿ

ಧಾರವಾಡ: ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ (ಇ.ಇ) ದೇವರಾಜ ಶಿಗ್ಗಾಂವಿ ಹಾಗೂ ಅವರ ಆಪ್ತರ ಕಚೇರಿಗಳ ಮೇಲೆ ಶನಿವಾರ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜಂಟಿ ದಾಳಿ ನಡೆಸಿದ್ದಾರೆ. 2018 ರಿಂದ 2023ರ ಅವಧಿಯಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ ನಡೆದ ವಿವಿಧ ಕಾಮಗಾರಿಗಳಲ್ಲಿ ವ್ಯಾಪಕ ಅವ್ಯವಹಾರ ಎಸಗಿರುವ ಹಾಗೂ ಸರ್ಕಾರಕ್ಕೆ ಭಾರಿ ಪ್ರಮಾಣದ ಆರ್ಥಿಕ ನಷ್ಟ ಉಂಟು ಮಾಡಿರುವ ಗಂಭೀರ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಧಾರವಾಡ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಅವರ…

Read More

ಮುಂಗಾರು ಮುನ್ನೆಚ್ಚರಿಕೆ ಹಾಗೂ ಕುಡಿಯುವ ನೀರಿನ ಸಮಸ್ಯೆ ತಡೆಗೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಧಾರವಾಡ: ಜಿಲ್ಲೆಯಾದ್ಯಂತ ಮುಂಗಾರು ಹಂಗಾಮಿನ ಮಳೆ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಹಾಗೂ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಗಳನ್ನು ನಡೆಸಿ ಸಂಬಂಧಿತ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ…

Read More