ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಮುನ್ನುಗ್ಗಿ ಸಾಧನೆ ಮಾಡಲಿ: ಮಾಜಿ ಶಾಸಕಿ ಕುಸುಮಾವತಿ ಚ ಶಿವಳ್ಳಿ ಕರೆ

​ಕುಂದಗೋಳ: ಆಧುನಿಕ ಯುಗದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಅಪ್ರತಿಮ ಸಾಧನೆ ಮಾಡುತ್ತಿದ್ದು, ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಮತ್ತಷ್ಟು ಎತ್ತರಕ್ಕೆ ಬೆಳೆಯಬೇಕು ಎಂದು ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ ಕರೆ ನೀಡಿದರು. ​ಪಟ್ಟಣದ ಮರಾಠಾ ಭವನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕ ಹಾಗೂ ವಿವಿಧ ವೃಂದಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ’ ಹಾಗೂ ‘ಮಹಿಳಾ ಸಬಲೀಕರಣ’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಇಂದು ಕೇವಲ ಮನೆಗೆ ಸೀಮಿತವಾಗದೆ ಭಾರತೀಯ ಸೇನೆ, ಪೊಲೀಸ್ ಇಲಾಖೆ,…

Read More

ಕುಂದಗೋಳ: ಅಂಚೆ ಕಚೇರಿಯಲ್ಲಿ ಗ್ರಾಹಕರು ಮರೆತ 50 ಸಾವಿರ ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಪೋಸ್ಟ್ ಮಾಸ್ಟರ್

ಕುಂದಗೋಳ: ಇಂದಿನ ಕಾಲದಲ್ಲಿ ಹಣದ ವ್ಯಾಮೋಹಕ್ಕೆ ಬಿದ್ದು ಮನುಷ್ಯತ್ವ ಮರೆಯುವವರ ನಡುವೆ, ಅಂಚೆ ಇಲಾಖೆಯ ಅಧಿಕಾರಿಯೊಬ್ಬರು ಗ್ರಾಹಕರು ಮರೆತು ಹೋದ ಬರೋಬ್ಬರಿ 50 ಸಾವಿರ ರೂಪಾಯಿ ನಗದು ಹಣವನ್ನು ಸುರಕ್ಷಿತವಾಗಿ ಮರಳಿಸುವ ಮೂಲಕ ಆದರ್ಶಪ್ರಾಯರಾಗಿದ್ದಾರೆ. ಪಟ್ಟಣದ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಮಹೇಶ್ ರಾಮನಕೊಪ್ಪ ಅವರ ಈ ಕರ್ತವ್ಯ ಪ್ರಜ್ಞೆ ಈಗ ಸಾರ್ವಜನಿಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ. ​ಕಳೆದ ಮಾರ್ಚ್ 10 ರಂದು ಗ್ರಾಹಕರೊಬ್ಬರು ಅಂಚೆ ಕಚೇರಿಗೆ ಒಟ್ಟು 3 ಲಕ್ಷ ರೂಪಾಯಿ ನಗದು ತೆಗೆದುಕೊಂಡು ಬಂದಿದ್ದರು….

Read More

​ಗುಡಿಸಾಗರ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಸಾಂಸ್ಕೃತಿಕ ವೈಭವ

ನವಲಗುಂದ: ತಾಲೂಕಿನ ಗುಡಿಸಾಗರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಸರಸ್ವತಿ ಪೂಜೆ, 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿದವು. ಕಾರ್ಯಕ್ರಮದ ಆರಂಭದಲ್ಲಿ ಗಣ್ಯರು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು. ನಂತರ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಂಡವು. ​ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿದಾನಂದ ಮುತ್ತಣ್ಣವರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗುರುಲಿಂಗಯ್ಯ ಹಿರೇಮಠ್ ಆಗಮಿಸಿದ್ದರು. ರಜಪೂತ ಶಿಕ್ಷಕಿಯರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಡಿಎಂಸಿ ಸದಸ್ಯ…

Read More

​ಧಾರವಾಡ: ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲಾ ಪಂಚಾಯತ್ ಸಹಾಯವಾಣಿ ಆರಂಭ

ಧಾರವಾಡ ಮಾ.11: ಧಾರವಾಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆ ಕಾಲದ ಹಿನ್ನಲೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಕ್ರಮವಹಿಸಲು ಮತ್ತು ಕಚೇರಿಗೆ ಸ್ವೀಕೃತವಾಗುವ ದೂರಗಳನ್ನು ಇತ್ಯರ್ಥಗೊಳಿಸಲು ಸಹಾಯವಾಣಿ ಕೇಂದ್ರ ಆರಂಭಿಸಲಾಗಿದ್ದು, ಸಾರ್ವಜನಿಕರು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಪಂಚಾಯತದಲ್ಲಿ ಸ್ಥಾಪಿತವಾಗಿರುವ ಸಹಾಯವಾಣಿ ಕೇಂದ್ರಕ್ಕೆ 0836-2742221 ಗೆ ಸಾರ್ವಜನಿಕರು ಕರೆ ಮಾಡಿ ಸಂಪರ್ಕಿಸಬಹುದು. ಧಾರವಾಡ ಜಿಲ್ಲಾ ಪಂಚಾಯತ ಕಚೇರಿಗೆ…

Read More

ವಿಷಯುಕ್ತ ಹೊಗೆ ನಿಯಂತ್ರಣಕ್ಕೆ ಆಗ್ರಹಿಸಿ ಶಿವಸೇನೆ ಪ್ರತಿಭಟನೆ

ಧಾರವಾಡ: ಧಾರವಾಡ ಹೊಸ ಯಲ್ಲಾಪೂರದ ಬಳಿಯಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಕಸದ ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡು ವಿಷಯುಕ್ತ ಹೊಗೆ ಧಾರವಾಡ ನಗರದ ವಿವಿಧ ಕಡೆಗಳಲ್ಲಿ ಹರಡಿಕೊಂಡು ಜನರು ಪರದಾಡುವ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಶಿವಸೇನೆ ಪಕ್ಷದ ಮುಖಂಡರು ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಧಾರವಾಡ ಹೊಸ ಯಲ್ಲಾಪುರ ರುದ್ರಭೂಮಿಯ ಬಳಿಯ ಕಸ ವಿಲೇವಾರಿ ಘಟಕದ ಸುತ್ತಮುತ್ತಲಿನ ಟೋಲ್ ನಾಖಾ, ವಿದ್ಯಾಗಿರಿ, ಲಕ್ಷ್ಮೀ ನಗರ, ಜನ್ನತ್ ನಗರ, ಹೊಸ ಯಲ್ಲಾಪೂರ, ನವಲೂರ ಆಗಸಿ, ಯಾಲಕ್ಕಿ…

Read More

ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಬ್ಯಾಂಕರ್ಸ್ ಪ್ರಗತಿ ಪರಿಶೀಲನಾ ಸಭೆ: ನಿಯಮ ಪಾಲನೆಗೆ ಸಿಇಒ ಭುವನೇಶ ಪಾಟೀಲ ಸೂಚನೆ

ಧಾರವಾಡ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ, ಖಾಸಗಿ ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲಾ ಬ್ಯಾಂಕ್‌ಗಳು ತಮ್ಮ ವ್ಯವಹಾರಗಳಲ್ಲಿ ಸರ್ಕಾರದ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಜನಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಸೂಚಿಸಿದರು. ಮಾ.10 ರಂದು ಬೆಳಿಗ್ಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಮಿತಿ (ಡಿಎಲ್‌ಆರ್‌ಸಿ) ಹಾಗೂ ಜಿಲ್ಲಾ ಮಟ್ಟದ ಸಲಹಾ ಸಮಿತಿ (ಡಿಸಿಸಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಹಕರಿಗೆ,…

Read More

ಧಾರವಾಡ: ಕಸದ ಗುಡ್ಡಕ್ಕೆ ಆವರಿಸಿದ ಬೆಂಕಿ; ವಿಷಯುಕ್ತ ಹೊಗೆಯಿಂದ ಕಂಗೆಟ್ಟ ಜನರಿಂದ ರಸ್ತೆ ತಡೆ ಪ್ರತಿಭಟನೆ

ಧಾರವಾಡ: ನಗರದ ಹೊಸಯಲ್ಲಾಪುರದಲ್ಲಿರುವ ಕಸದ ವಿಲೇವಾರಿ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟವಾದ ವಿಷಯುಕ್ತ ಹೊಗೆ ಆವರಿಸಿದ್ದು, ಇದರಿಂದ ಆಕ್ರೋಶಗೊಂಡ ನಾಗರಿಕರು ಸೋಮವಾರ ಹುಬ್ಬಳ್ಳಿ-ಧಾರವಾಡ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಿದರು. ​ಹೊಸಯಲ್ಲಾಪುರದ ಕಸದ ಗುಡ್ಡಕ್ಕೆ ಸೋಮವಾರ ಮುಂಜಾನೆ ಬೆಂಕಿ ಹತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆ ಇಡೀ ಪ್ರದೇಶ ಹೊಗೆಮಯವಾಗಿದೆ. ಈ ಭಾಗದಿಂದ ಹೊರಹೊಮ್ಮಿದ ಗಾಢವಾದ ವಿಷಯುಕ್ತ ಹೊಗೆಯು ಗಾಂಧಿನಗರ, ಹೊಸಯಲ್ಲಾಪುರ ಹಾಗೂ ಟೋಲನಾಕಾ ಸೇರಿದಂತೆ ಹಲವು ಬಡಾವಣೆಗಳನ್ನು ಆವರಿಸಿಕೊಂಡಿದೆ. ಇದರಿಂದಾಗಿ ಸ್ಥಳೀಯ ನಿವಾಸಿಗಳು ಉಸಿರಾಟದ…

Read More

​ಮೀಡಿಯಾ ಫೆಸ್ಟ್-2026ಕ್ಕೆ ಚಾಲನೆ: ಎಐ ಮತ್ತು ಆಧುನಿಕ ತಂತ್ರಜ್ಞಾನ ಪತ್ರಿಕೋದ್ಯಮದ ಹೊಸ ದಿಕ್ಸೂಚಿ – ಕುಲಪತಿ ಪ್ರೊ. ಎ. ಎಂ. ಖಾನ್

ಧಾರವಾಡ: ಮಾ.09: ವಿಶ್ವದ ಮಾಧ್ಯಮ ಮುಕ್ತವಾಗಿದೆ. ಒಬ್ಬರಿಂದ ಒಬ್ಬರಿಗೆ ಮಾಹಿತಿಯನ್ನು ತಲುಪಿಸುವುದು ಮಾಧ್ಯಮದ ಕಾರ್ಯವಾಗಿದೆ. ಹಳೆಯ ಕಾಲದ ಪತ್ರಿಕೋದ್ಯಮ ಬದಲಾಗಿದೆ. ಹೊಸ ಹೊಸ ತಂತ್ರಜ್ಞಾನ, ಆರ್ಟಿಫಿಷಿಯಲ್ ಇಂಟಲಿಜೆನ್ಸ್‌ನಿಂದ ಪತ್ರಿಕಾ ರಂಗಕ್ಕೆ ಹೊಸ ದಿಕ್ಸೂಚಿ ಮೂಡಿದೆ. ವಿದ್ಯಾರ್ಥಿಗಳ ಪ್ರತಿಭೆ ಗುರುತಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮೀಡಿಯಾ ಫೆಸ್ಟ್ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎ.ಎಂ. ಖಾನ್ ಹೇಳಿದರು. ಅವರು ಇಂದು (ಮಾ.09) ಬೆಳಿಗ್ಗೆ ಕರ್ನಾಟಕ ವಿಶ್ವವಿದ್ಯಾಲಯದ ಕನಕ ಅಧ್ಯಯನ ಪೀಠದ ಸಭಾಂಗಣದಲ್ಲಿ…

Read More

​ಮುಳ್ಳಹಳ್ಳಿಯಲ್ಲಿ ‘ಮಾಯ್ ಪಬ್ಲಿಕ್ ಸಮಾಚಾರ’ ಸುದ್ದಿ ವಾಹಿನಿಯ ಆ್ಯಪ್ ಲೋಕಾರ್ಪಣೆ

ಧಾರವಾಡ: ಸತ್ಯನಿಷ್ಠ ಸುದ್ದಿಗಳ ಪ್ರಸಾರ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳಿಗೆ ಧ್ವನಿಯಾಗುವ ಉದ್ದೇಶದೊಂದಿಗೆ, ಯುವ ಪತ್ರಕರ್ತ ಗಿರೀಶ ಘಾಟಗೆ ಅವರ ಸಾರಥ್ಯದಲ್ಲಿ ಆರಂಭವಾಗಿರುವ ‘ಮಾಯ್ ಪಬ್ಲಿಕ್ ಸಮಾಚಾರ’ (My Public Samachar) ಸುದ್ದಿ ವಾಹಿನಿಯ ಮೊಬೈಲ್ ಆ್ಯಪ್ ಅನ್ನು ಶನಿವಾರ ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು. ​ಕುಂದಗೋಳ ತಾಲ್ಲೂಕಿನ ಮುಳ್ಳಹಳ್ಳಿ ಗ್ರಾಮದ ಶ್ರೀ ಚನ್ನವೀರೇಶ್ವರ ವಿರಕ್ತಮಠದ ವತಿಯಿಂದ ಆಯೋಜಿಸಲಾಗಿದ್ದ ಬಸವ ಪುರಾಣ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯದಲ್ಲಿ ಈ ಆ್ಯಪ್ ಲೋಕಾರ್ಪಣೆಗೊಂಡಿತು. ​ಶ್ರೀಗಳ ಆಶೀರ್ವಚನ ​ಕಾರ್ಯಕ್ರಮದಲ್ಲಿ ಆ್ಯಪ್ ಬಿಡುಗಡೆ ಮಾಡಿ ಆಶೀರ್ವಚನ…

Read More

ಮಿತ ಸಮಯದಲ್ಲಿ ಓದುವ ಕಥೆಗಳು ಇಂದಿನ ಅಗತ್ಯ: ಡಾ. ಶ್ರೀಧರ ಹೆಗಡೆ ಭದ್ರನ್ ಅಭಿಪ್ರಾಯ

​ಧಾರವಾಡ: ಇಂದಿನ ಯಾಂತ್ರಿಕ ಜೀವನದಲ್ಲಿ ದೀರ್ಘವಾದ ಕಥೆಗಳನ್ನು ಓದುವ ವ್ಯವಧಾನ ಯಾರಿಗೂ ಇಲ್ಲದಂತಾಗಿದೆ. ಇಂತಹ ಸಂದರ್ಭದಲ್ಲಿ ಮಿತ ಸಮಯದಲ್ಲಿ ಹೇಳುವ ಮತ್ತು ಓದುವ ಕಥೆಗಳೇ ಹೆಚ್ಚು ಜನಪ್ರಿಯವಾಗುತ್ತಿವೆ ಎಂದು ಉಪನ್ಯಾಸಕ ಡಾ. ಶ್ರೀಧರ ಹೆಗಡೆ ಭದ್ರನ್ ತಿಳಿಸಿದರು. ​ನಗರದ ಕ.ವಿ.ವಿ. ಸಂಘವು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಡಾ. ಬಸವರಾಜ ಸಾದರ ಅವರು ಸಂಪಾದಿಸಿದ ‘ಮಿತಸಮಯ’ ಮಹಿಳಾ ಕಥಾ ಸಂಚಯ ಕೃತಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಈ ಕಥಾ ಸಂಕಲನದಲ್ಲಿ ಹತ್ತು ಜನ ಕಥೆಗಾರ್ತಿಯರು ವಿಭಿನ್ನ ಶೈಲಿ ಹಾಗೂ…

Read More