ವಿದ್ಯಾರ್ಥಿಗಳು ಉತ್ತಮ ಮೌಲ್ಯಗಳೊಂದಿಗೆ ಆದರ್ಶ ಪ್ರಜೆಗಳಾಗಿ ರೂಪುಗೊಳ್ಳಲಿ: ಅಬಕಾರಿ ನಿರೀಕ್ಷಕ ರಾಮು ಆರೇಣ್ಣವರ ಕರೆ

ನವಲಗುಂದ: ವಿದ್ಯಾರ್ಥಿಗಳು ಶಿಸ್ತು, ಸಂಯಮ ಮತ್ತು ಸಂಸ್ಕಾರದಂತಹ ಉತ್ತಮ ಜೀವನ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಜವಾಬ್ದಾರಿಯುತ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ನವಲಗುಂದ ವಲಯದ ಅಬಕಾರಿ ನಿರೀಕ್ಷಕರಾದ ರಾಮು ಆರೇಣ್ಣವರ ಅವರು ತಿಳಿಸಿದರು. ಪಟ್ಟಣದ ಬಸವೇಶ್ವರ ನಗರದಲ್ಲಿರುವ ಮೌಲಾನಾ ಅಜಾದ್ ಮಾದರಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ಸ್ನೇಹ ಸಮ್ಮೇಳನವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ​ಇಂದಿನ ಯುವ ಪೀಳಿಗೆಯು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ, ಉತ್ತಮ ಆರೋಗ್ಯಕ್ಕಾಗಿ ಪೋಷಕಾಂಶಯುಕ್ತ ಆಹಾರ ಸೇವನೆಗೆ ಆದ್ಯತೆ ನೀಡಬೇಕು….

Read More

ಗುಡಿಸಾಗರ ಗ್ರಾಮದಲ್ಲಿ ಸ್ವಚ್ಛತಾ ಆಂದೋಲನ: ಕೆರೆ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ಶಾಸಕ ಎನ್.ಹೆಚ್. ಕೋನರಡ್ಡಿ

ನವಲಗುಂದ: ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಹಮ್ಮಿಕೊಳ್ಳಲಾದ ಸ್ವಚ್ಛತಾ ಆಂದೋಲನ ಹಾಗೂ ಕುಡಿಯುವ ನೀರಿನ ಕೆರೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎನ್.ಹೆಚ್. ಕೋನರಡ್ಡಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದ ಸರ್ವಾಂಗೀಣ ಅಭಿವೃದ್ಧಿ ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಈ ಕಾಮಗಾರಿಗಳ ಪ್ರಗತಿಯನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ವೀಕ್ಷಿಸಿದರು. ​ಗ್ರಾಮದ ಪ್ರಮುಖ ಜಲಮೂಲವಾಗಿರುವ ಕೆರೆಯನ್ನು ಅಭಿವೃದ್ಧಿಪಡಿಸುವ ಮೂಲಕ ಬೇಸಿಗೆಯಲ್ಲಿ ಎದುರಾಗಬಹುದಾದ ನೀರಿನ ಅಭಾವವನ್ನು ತಪ್ಪಿಸಲು ಕ್ರಮ…

Read More

ಅಣ್ಣಿಗೇರಿ ತಹಶೀಲ್ದಾರ್ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಜನತಾ ದರ್ಶನ: ಸಾಸ್ವಿಹಳ್ಳಿ ಸ್ಮಶಾನ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಗಡುವು

ಅಣ್ಣಿಗೇರಿ: ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಿ, ಆಡಳಿತದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಇಂದು ಅಣ್ಣಿಗೇರಿ ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿ ಅಹವಾಲುಗಳನ್ನು ಸ್ವೀಕರಿಸಿದರು. ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಮುಂದೆ ಬಿಚ್ಚಿಟ್ಟರು. ಈ ವೇಳೆ ಪ್ರಮುಖವಾಗಿ ಸಾಸ್ವಿಹಳ್ಳಿ ಗ್ರಾಮದ ಸ್ಮಶಾನ ಭೂಮಿಯ ಸಮಸ್ಯೆಯು ಜಿಲ್ಲಾಧಿಕಾರಿಗಳ ಗಮನ ಸೆಳೆಯಿತು. ಗ್ರಾಮಕ್ಕೆ ಮಂಜೂರಾದ ಸ್ಮಶಾನ ಭೂಮಿಯಲ್ಲಿ ಮಳೆಗಾಲದಲ್ಲಿ ನೀರು ನಿಲ್ಲುತ್ತಿದ್ದು, ಅಲ್ಲಿಗೆ ಹೋಗುವ ದಾರಿಯೂ ದುಸ್ತರವಾಗಿದೆ ಎಂದು…

Read More

ನವಲಗುಂದದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಿಂಚಿನ ಸಂಚಲನ: ಮಾಡೆಲ್ ಹೈಸ್ಕೂಲ್ ವಿದ್ಯಾರ್ಥಿಗಳೊಂದಿಗೆ ಸಂವಾದ, ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ

ನವಲಗುಂದ: ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುವುದು ಪ್ರತಿಯೊಬ್ಬ ಸರ್ಕಾರಿ ನೌಕರನ ಆದ್ಯ ಕರ್ತವ್ಯವಾಗಿದ್ದು, ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಚೇರಿ ಸಮಯದಲ್ಲಿ ಕಡ್ಡಾಯವಾಗಿ ಸಾರ್ವಜನಿಕರಿಗೆ ಲಭ್ಯವಿರಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಬುಧವಾರ ಬೆಳಿಗ್ಗೆ ನವಲಗುಂದ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ನಂತರ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ ಮಾತನಾಡಿದ ಅವರು, ಕ್ಷೇತ್ರ ಭೇಟಿಯ ಸಮಯವನ್ನು ಹೊರತುಪಡಿಸಿ ಉಳಿದ ಅವಧಿಯಲ್ಲಿ ಅಧಿಕಾರಿಗಳು ಕಚೇರಿಯಲ್ಲಿದ್ದು…

Read More

​ಜಿಲ್ಲಾಧಿಕಾರಿಗಳ ಕುಂದಗೋಳ ಭೇಟಿ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ಮುಂದೂಡಿಕೆ

ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಭೇಟಿ ಹಾಗೂ ವಿವಿಧ ಸಭೆಗಳ ಹಿನ್ನೆಲೆಯಲ್ಲಿ, ನಾಳೆ (ಫೆಬ್ರವರಿ 19) ಕುಂದಗೋಳ ತಾಲೂಕು ಕಚೇರಿಯಲ್ಲಿ ನಿಗದಿಯಾಗಿದ್ದ ಜಿಲ್ಲಾಧಿಕಾರಿಗಳ ಭೇಟಿ ಮತ್ತು ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ​ನಾಳೆ ಬೆಳಿಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಧಾರವಾಡಕ್ಕೆ ಆಗಮಿಸಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಮತ್ತು ಅಧಿಕಾರಿಗಳ ಪ್ರಮುಖ ಸಭೆಯಲ್ಲಿ ಭಾಗವಹಿಸುತ್ತಿರುವ ಕಾರಣ, ಜಿಲ್ಲಾಧಿಕಾರಿಗಳಾದ ಸ್ನೇಹಲ್ ಆರ್. ಅವರು ಅನಿವಾರ್ಯವಾಗಿ ಕುಂದಗೋಳ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಈ ಮೊದಲು ನಿಗದಿಯಾಗಿದ್ದ…

Read More

​ನಾಳೆ ಕುಂದಗೋಳಕ್ಕೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಭೇಟಿ: ಸಾರ್ವಜನಿಕ ಅಹವಾಲು ಸ್ವೀಕಾರ

ಕುಂದಗೋಳ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಧಾರವಾಡ ಜಿಲ್ಲಾಧಿಕಾರಿಗಳಾದ ಸ್ನೇಹಲ್ ಆರ್. ಅವರು ನಾಳೆ ಕುಂದಗೋಳ ತಾಲೂಕಿಗೆ ಭೇಟಿ ನೀಡಲಿದ್ದಾರೆ. ದಿನಾಂಕ 19.02.2026ರ ಗುರುವಾರದಂದು ಬೆಳಿಗ್ಗೆ 10.30ಕ್ಕೆ ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಿದ್ದಾರೆ. ​ತಾಲೂಕಿನ ವಿವಿಧ ಗ್ರಾಮಗಳ ಸಾರ್ವಜನಿಕರು ತಮ್ಮ ಕುಂದುಕೊರತೆಗಳು, ಭೂ ದಾಖಲೆಗಳ ಸಮಸ್ಯೆ, ಪಡಿತರ ಚೀಟಿ, ಪಿಂಚಣಿ ಸೌಲಭ್ಯ ಸೇರಿದಂತೆ ಇಲಾಖಾವಾರು ದೂರುಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ನೇರವಾಗಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು…

Read More

ಅಳ್ನಾವರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ನಿಲನಕ್ಷೆ; ಹಿರೇಕೆರೆ ಒತ್ತುವರಿ ತೆರವು ಮಾಡಿ, ಕೆರೆ ಸ್ವಚ್ಛಗೊಳಿಸಲು ಕ್ರಮ : ಜಿಲ್ಲಾಧಿಕಾರಿ ಸ್ನೇಹಲ್ ಆರ್

ಧಾರವಾಡ: ಅಳ್ನಾವರ ತಾಲೂಕಿನ ಮೂಲಭೂತ ಸೌಕರ್ಯಗಳ ಉನ್ನತಿಕರಣಕ್ಕೆ ಆದ್ಯತೆ ನೀಡಿ ತಾಲೂಕಿನ ಸಮಗ್ರಭಿವೃದ್ಧಿಗೆ ನಿಲನಕ್ಷೆ ರೂಪಿಸಲಾಗುವುದು ಮತ್ತು ಅಳ್ನಾವರ ಪಟ್ಟಣದ ಹಿರೇಕೆರೆಯ ಒತ್ತುವರಿಯನ್ನು ತೆರವುಗೊಳ್ಳಿಸಿ, ಕೆರೆಯಲ್ಲಿನ ಅಂತರಗಂಗೆ ಸೇರಿದಂತೆ ಮುಳ್ಳು ಕಂಟಿಗಳನ್ನು ತೆಗೆದು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ನಿರ್ದೇಶಿಸಿದರು. ಅವರು (ಫೆ.17) ಮಧ್ಯಾಹ್ನ ಅಳ್ಳಾವರ ಪಟ್ಟಣದ ಉಮಾಮಹೆಶ್ವರ ಭವನದಲ್ಲಿ ತಾಲೂಕಾ ಆಡಳಿತದಿಂದ ಆಯೋಜಿಸಿದ್ದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯ ಅಧ್ಯಕ್ಷತೆ ವಹಿಸಿ, ಜನರ ಸಮಸ್ಯೆಗಳನ್ನು ಆಲಿಸಿ,…

Read More

ಧಾರವಾಡದಲ್ಲಿ ‘ಮಾಯಾಂಗಿ’ಯ ಹನಿಟ್ರ್ಯಾಪ್‌: ಪ್ರೀತಿಯ ನಾಟಕವಾಡಿ ಲಕ್ಷಾಂತರ ರೂಪಾಯಿ ಪಂಗನಾಮ!

ಧಾರವಾಡ: ಪ್ರೀತಿ, ಮದುವೆಯೆಂಬ ಆಮಿಷವೊಡ್ಡಿ ಯುವಕರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಕಿಲಾಡಿ ಲೇಡಿಯೊಬ್ಬಳ ಅಸಲಿ ಮುಖವಾಡ ಕಳಚಿದೆ. ಅರೋಹಿ, ರೇಣುಕಾ ಹಾಗೂ ಐಶ್ವರ್ಯ ಎಂಬ ಮೂರು ಹೆಸರುಗಳನ್ನು ಬಳಸಿಕೊಂಡು ಯುವಕರಿಗೆ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಈ ‘ಮಾಯಾಂಗಿ’ಯ ಜಾಲಕ್ಕೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ​ನಡೆದಿದ್ದೇನು? ​ಬಂಧಿತ ಯುವತಿಯನ್ನು ಐಶ್ವರ್ಯ ಎಂದು ಗುರುತಿಸಲಾಗಿದ್ದು, ಈಕೆ ತನ್ನ ಸೌಂದರ್ಯವನ್ನೇ ಬಂಡವಾಳ ಮಾಡಿಕೊಂಡು ಯುವಕರನ್ನು ಟಾರ್ಗೆಟ್ ಮಾಡುತ್ತಿದ್ದಳು. ಧಾರವಾಡದ ಗುರು ವಕ್ಕುಂದ್ ಎಂಬ ಯುವಕನಿಗೆ ಮದುವೆಯಾಗುವುದಾಗಿ…

Read More

ಧಾರವಾಡ: 565 ಲೇವಾದೇವಿಗಾರರಿಗೆ ಸಹಕಾರ ಇಲಾಖೆ ಎಚ್ಚರಿಕೆ; 15 ದಿನಗಳಲ್ಲಿ ದಾಖಲೆ ಸಲ್ಲಿಸದಿದ್ದರೆ ಭದ್ರತಾ ಠೇವಣಿ ಮುಟ್ಟುಗೋಲು

​ಧಾರವಾಡ: ಜಿಲ್ಲೆಯಲ್ಲಿ ಪರವಾನಗಿ ನವೀಕರಿಸದೆ ಹಾಗೂ ನಿಯಮಾನುಸಾರ ವರದಿ ಸಲ್ಲಿಸದೆ ನಿಷ್ಕ್ರಿಯವಾಗಿರುವ 565 ಲೇವಾದೇವಿ ಸಂಸ್ಥೆಗಳ ವಿರುದ್ಧ ಸಹಕಾರ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಮುಂದಿನ 15 ದಿನಗಳೊಳಗಾಗಿ ಸೂಕ್ತ ದಾಖಲೆ ಹಾಗೂ ವಿವರಣೆ ನೀಡದಿದ್ದಲ್ಲಿ ಅಂತಹ ಸಂಸ್ಥೆಗಳ ಭದ್ರತಾ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಸಹಕಾರ ಸಂಘಗಳ ಸಹಾಯಕ ನಿಬಂಧಕ ನಿಂಗರಾಜ ಬೆಣ್ಣಿ ಅವರು ಎಚ್ಚರಿಕೆ ನೀಡಿದ್ದಾರೆ. ​ನಿಯಮ ಉಲ್ಲಂಘನೆ ಹಿನ್ನೆಲೆ: ​ಧಾರವಾಡ ಜಿಲ್ಲೆಯಲ್ಲಿ ಸದ್ಯ 814 ಲೇವಾದೇವಿಗಾರರು, 112 ಗಿರವಿದಾರರು ಹಾಗೂ 286 ಫೈನಾನ್ಸ್…

Read More

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಭಯಮುಕ್ತರಾಗಿ ಪರೀಕ್ಷೆ ಎದುರಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಕಿವಿಮಾತು

ಧಾರವಾಡ: “ವಿದ್ಯಾರ್ಥಿಗಳು ಪರೀಕ್ಷಾ ಒತ್ತಡಕ್ಕೆ ಒಳಗಾಗದೆ, ಆತ್ಮವಿಶ್ವಾಸದಿಂದ ಮತ್ತು ಭಯಮುಕ್ತರಾಗಿ ಪರೀಕ್ಷೆಯನ್ನು ಎದುರಿಸಬೇಕು” ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ​2025-26ನೇ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಇಂದು (ಫೆ.16) ಆಯೋಜಿಸಲಾಗಿದ್ದ ‘ಜ್ಞಾನ ಸಿಂಚನ’ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಉತ್ತಮ ಅಂಕ ಗಳಿಸಲು ಹೇಗೆ ವ್ಯವಸ್ಥಿತವಾಗಿ ಅಧ್ಯಯನ ಮಾಡಬೇಕು ಎಂಬುದರ ಕುರಿತು ವಿದ್ಯಾರ್ಥಿಗಳೊಂದಿಗೆ ಅವರು ಸಂವಾದ ನಡೆಸಿದರು. ​ತಜ್ಞರಿಂದ ಸಮಸ್ಯೆಗಳಿಗೆ…

Read More