ಸಾಮಾಜಿಕ ನ್ಯಾಯ ಮತ್ತು ರಾಜಕೀಯ ಬದಲಾವಣೆಗಾಗಿ ಜೆಡಿಯು ಬೆಂಬಲಿಸಿ: ಶ್ರೀಶೈಲಗೌಡ ಕಮತರ ಕರೆ
ಧಾರವಾಡ: ನಗರದ ಶ್ರೀನಗರದಲ್ಲಿ ಇತ್ತೀಚೆಗೆ ಜೆಡಿಯು ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಜೆಡಿಯು ಜಿಲ್ಲಾ ಅಧ್ಯಕ್ಷರಾದ ಶ್ರೀಶೈಲಗೌಡ ಕಮತರ ಅವರು ಮಾತನಾಡಿ, ಸಮಾಜದಲ್ಲಿ ಬದಲಾವಣೆ ತರಲು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಸಾರ್ವಜನಿಕರು ಜೆಡಿಯು ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಜೆಡಿಯು ಪಕ್ಷವು ಪ್ರಜಾಪ್ರಭುತ್ವ ಹಾಗೂ ಸಮಾಜವಾದಿ ತಳಹದಿಯ ಮೇಲೆ ಭಾರತವನ್ನು ಕಟ್ಟಲು ಗಾಂಧಿ ತತ್ವ ಮತ್ತು ಮೌಲ್ಯಗಳನ್ನು ಪಾಲಿಸುತ್ತಾ ಬಂದಿದೆ. ದೇಶದ ಶ್ರೀಮಂತ ಸಂಸ್ಕೃತಿ ಮತ್ತು ಸಂಪ್ರದಾಯಗಳಿಂದ ಸ್ಪೂರ್ತಿ…

