ಮೆಕ್ಕೆಜೋಳ ಖರೀದಿ ವಂಚನೆಯಲ್ಲಿ ಕುಂದಗೋಳ ಪಿಎಸ್ಐ ( ಪೋಲಿಸ್ ಸಬ್ ಇನ್ಸಪೆಕ್ಟರ) ಶಾಮೀಲು ಆರೋಪ

ಕುಂದಗೋಳ : ದಾವಣಗೆರೆ ಮೂಲದ ವ್ಯಕ್ತಿಯೊಬ್ಬ ಸ್ಥಳೀಯ ರೈತರೊಬ್ಬರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಖರೀದಿಸಿ ವಂಚಿಸಿರುವ ಪ್ರಕರಣದಲ್ಲಿ ಕುಂದಗೋಳ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವರೇ ಆರೋಪಿಯೊಂದಿಗೆ ಶಾಮೀಲಾಗಿದ್ದಾರೆ ಎಂದು ರೈತಪರ ಹೋರಾಟಗಾರ ಮಹೇಶ ಬ. ಕಲಘಟಗಿ ಗಂಭೀರ ಆರೋಪ ಮಾಡಿದ್ದಾರೆ. ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಅವರು, ದಾವಣಗೆರೆ ಮೂಲದ ಕೆ.ಎಸ್. ಪ್ರಶಾಂತ ಎಂಬ ವ್ಯಕ್ತಿಯು ಕಳೆದ ಜನವರಿ 4, 2026 ರಂದು ಸಂಶಿ ಗ್ರಾಮದ…

Read More

ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಮುಖ್ಯ ಶಿಕ್ಷಕಿ ಶಾಂತಾ ಹೂಗಾರ ಮರುನೇಮಕ: ಹಿರೇಹರಕುಣಿ ಗ್ರಾಮಸ್ಥರಲ್ಲಿ ಮೂಡಿದ ಹರ್ಷ

ಕುಂದಗೋಳ: ತಾಲ್ಲೂಕಿನ ಹಿರೇಹರಕುಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶಾಂತಾ ಹೂಗಾರ ಅವರ ಅಮಾನತು ಆದೇಶವನ್ನು ಖಂಡಿಸಿ ಗ್ರಾಮಸ್ಥರು, ಪಾಲಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಬುದುವಾರದಂದು ಶಾಲಾ ಆವರಣದಲ್ಲಿ ಮಹನೀಯರ ಭಾವಚಿತ್ರಗಳನ್ನು ಇರಿಸಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಮಹಾದೇವಿ ಮಾಡಲಗೇರಿ ಹಾಗೂ ತಹಶೀಲ್ದಾರ ರಾಜು ಮಾವರಕರ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ…

Read More

ಮುಖ್ಯ ಶಿಕ್ಷಕಿ ಅಮಾನತು: ಕುಂದಗೋಳದ ತಾ ಹಿರೇಹರಕುಣಿ ಸ.ಹಿ.ಪ್ರಾ.ಶಾಲೆ ಮುಂಭಾಗ ತೀವ್ರ ಪ್ರತಿಭಟನೆ,

ಕುಂದಗೋಳ: ತಾಲ್ಲೂಕಿನ ಹಿರೇಹರಕುಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶಾಂತಾ ಹೂಗಾರ ಅವರನ್ನು ಏಕಾಏಕಿ ಅಮಾನತು ಮಾಡಿರುವುದನ್ನು ಖಂಡಿಸಿ ಶಾಲಾ ಆವರಣದಲ್ಲಿ ಬುಧವಾರ ವಿದ್ಯಾರ್ಥಿಗಳು, ಪಾಲಕರು, ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರು. ನೆಚ್ಚಿನ ಶಿಕ್ಷಕಿಯ ಅಮಾನತಿನಿಂದ ಆಕ್ರೋಶಗೊಂಡ ನೂರಾರು ಗ್ರಾಮಸ್ಥರು ಶಾಲಾ ಆವರಣದಲ್ಲಿ ಜಮಾಯಿಸಿದ್ದರಿಂದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತು. ಶಾಂತಾ ಹೂಗಾರ ಅವರನ್ನು ಮರಳಿ ತಮ್ಮ ಶಾಲೆಗೆ ನಿಯೋಜನೆ ಮಾಡಬೇಕು ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರು ರಾತ್ರಿಯವರೆಗೂ…

Read More

ಕುಂದಗೋಳ ತಾಲೂಕು ಗ್ಯಾರಂಟಿ ಅಧ್ಯಕ್ಷ ಸ್ಥಾನಕ್ಕೆ ಗ್ಯಾರಂಟಿ ಇಲ್ಲದಂತಾಗಿದೆ…!

ವರದಿ: ಪಬ್ಲಿಕ್ ಸಮಾಚಾರ ಕುಂದಗೋಳ: ದಿವಂಗತ ಸಚಿವ ಸಿ.ಎಸ್. ಶಿವಳ್ಳಿ ಅವರ ನಿಧನದ ಬಳಿಕ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಡಜನ್‌ಗಟ್ಟಲೆ ಮುಖಂಡರ ನಡುವಿನ ಒಳಜಗಳದಿಂದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರ ಹುದ್ದೆಯೇ ಹಾವು-ಏಣಿ ಆಟಕ್ಕೆ ಸಾಕ್ಷಿಯಾಗಿದೆ. ಹೌದು, ಇಲ್ಲಿನ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ನಾಯಕರು ಪ್ರಭಾವ ಹೊಂದಿರುವ ಕಾರಣ ಇಂತಹ ಬೆಳವಣಿಗೆಗಳು ನಿರಂತರವಾಗಿ ನಡೆಯುತ್ತಿವೆ. ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರ ಹುದ್ದೆ ಕಳೆದ ಮೂರು ವರ್ಷಗಳಲ್ಲಿ ಮೂರು ಬಾರಿ ಬದಲಾಗಿರುವುದು ಇದಕ್ಕೆ ಸ್ಪಷ್ಟ…

Read More

ಗುಡಿಸಾಗರ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ: ವಿದ್ಯಾರ್ಥಿಗಳಿಗೆ ಪುಸ್ತಕ, ಸಿಹಿ ವಿತರಣೆ

ನವಲಗುಂದ: ತಾಲ್ಲೂಕಿನ ಗುಡಿಸಾಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರದಂದು ಜೂನ್ 1ರ ಶಾಲಾ ಪ್ರಾರಂಭೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಸುದೀರ್ಘ ಬೇಸಿಗೆ ರಜೆಯ ಮಜಾವನ್ನು ಮುಗಿಸಿ ಮರಳಿ ಶಾಲೆಗೆ ಹೆಜ್ಜೆ ಇಟ್ಟ ಮುದ್ದು ಮಕ್ಕಳಿಗೆ ಶಾಲೆಯ ವತಿಯಿಂದ ಆತ್ಮೀಯ ಸ್ವಾಗತ ಕೋರಲಾಯಿತು. ​ಹೊಸ ಶೈಕ್ಷಣಿಕ ವರ್ಷದ ಮೊದಲ ದಿನವಾದ್ದರಿಂದ ಶಾಲಾ ಆವರಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮೊದಲ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಗೆ ಆಗಮಿಸಿದ್ದು ವಿಶೇಷವಾಗಿತ್ತು. ಶಾಲೆಗೆ ಬಂದ…

Read More

ಕುಂದಗೋಳ ಪಟ್ಟಣ ಪಂಚಾಯಿತಿಗೆ ನೂತನ ಮುಖ್ಯಾಧಿಕಾರಿಯಾಗಿ ಗಂಗಾಧರ ಸಾನಕ್ಯಾನವರ ನೇಮಕ

ಕುಂದಗೋಳ: ರಾಜ್ಯ ಸರ್ಕಾರದ ಪೌರಾಡಳಿತ ನಿರ್ದೇಶನಾಲಯದ ಆದೇಶದಂತೆ ಕುಂದಗೋಳ ಪಟ್ಟಣ ಪಂಚಾಯಿತಿಯ ನೂತನ ಮುಖ್ಯಾಧಿಕಾರಿಯಾಗಿ ಗಂಗಾಧರ ಸಾನಕ್ಯಾನವರ ಅವರನ್ನು ನೇಮಕ ಮಾಡಲಾಗಿದೆ. ಕುಂದಗೋಳ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯಾಗಿದ್ದ ಸಿ.ವಿ. ಕುಲಕರ್ಣಿ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಮೇ 31ರಂದು ಈ ಹುದ್ದೆ ತೆರವಾಗಿತ್ತು. ತೆರವಾದ ಹುದ್ದೆಗೆ ರಾಜ್ಯ ಸರ್ಕಾರವು ಮೇ 27ರಂದು ಹೊರಡಿಸಿದ ಆದೇಶದ ಅನ್ವಯ ಗಂಗಾಧರ ಸಾನಕ್ಯಾನವರ ಅವರನ್ನು ಮುಖ್ಯಾಧಿಕಾರಿಯಾಗಿ ನೇಮಕಗೊಳಿಸಿದೆ. ನೂತನ ಮುಖ್ಯಾಧಿಕಾರಿಯಾಗಿ ಗಂಗಾಧರ ಸಾನಕ್ಯಾನವರ ಅವರು ಜೂನ್ 1ರಂದು ಅಧಿಕಾರ ಸ್ವೀಕರಿಸಿದ್ದಾರೆ….

Read More

ಧಾರವಾಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಐದು ಜನ ಶಾಸಕರಲ್ಲಿ ಯಾರಿಗೆ ಒಲಿಯಲಿದೆ ಮಂತ್ರಿ ಭಾಗ್ಯ?

ವರದಿ: ಗಿರೀಶ ಘಾಟಗೆ ಧಾರವಾಡ: ರಾಜ್ಯದಲ್ಲಿ ನೂತನ ಸಿಎಂ ಆಯ್ಕೆ ಪ್ರಕ್ರಿಯೆ ಬಹುತೇಕ ಖಚಿತವಾಗಿದ್ದು, ಅದರಂತೆ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಬಹುತೇಕ ನಿಶ್ಚಿತ ಎನ್ನಲಾಗುತ್ತಿದೆ. ಇದರ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರ ಸರ್ಕಾರದ ನೂತನ ಸಚಿವ ಸಂಪುಟದ ಮೊದಲ ಪಾಳಿಯಲ್ಲಿ ಸಚಿವರಾಗಲಿರುವ ಸಂಭಾವ್ಯ 14 ಶಾಸಕರ ಹೆಸರುಗಳು ಮುಂಚೂಣಿಗೆ ಬಂದಿದ್ದು, ಹೈಕಮಾಂಡ್ ಮಟ್ಟದಲ್ಲಿ ಪಟ್ಟಿ ಸಿದ್ಧವಾಗುತ್ತಿದೆ. ಅದರಂತೆ ರಾಜ್ಯದಲ್ಲಿಯೇ ಎರಡನೇ ದೊಡ್ಡ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡ…

Read More

ಈಜಲು ಹೋಗಿ ಜಲಸಮಾಧಿಯಾದ ಮೂವರು ಹದಿಹರೆಯದ ಬಾಲಕರು: ಸಿಂಗನಳ್ಳಿಯಲ್ಲಿ ಆವರಿಸಿದ ಶೋಕಛಾಯೆ

ಧಾರವಾಡ: ಬೇಸಿಗೆಯ ತೀವ್ರ ಬಿಸಿಲಿನ ತಾಪಕ್ಕೆ ತಣ್ಣಗಾಗಲು ಕೆರೆಗೆ ಈಜಲು ಹೋದ ಮೂವರು ಹದಿಹರೆಯದ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ತಾಲೂಕಿನ ಸಿಂಗನಳ್ಳಿ ಗ್ರಾಮದ ಸಮೀಪದ ಕರೆಮ್ಮನಕೆರೆಯಲ್ಲಿ ಶನಿವಾರ ಸಂಭವಿಸಿದೆ. ​ಸಿಂಗನಳ್ಳಿ ಗ್ರಾಮದ ನಿವಾಸಿಗಳಾದ ಅನ್ವರ ಇಬ್ರಾಹಿಂ ವಟ್ನಾಳ (13), ಸುಭಾನಿ ಇಸಾಕ್ ಬಾಗಜಿಕೊಪ್ಪ (12) ಹಾಗೂ ಮೆಹಬೂಬಸುಭಾನಿ ದಾದಾಫೀರ ವಡ್ನಾಳ (15) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ​ಪ್ರಸ್ತುತ ದಿನಗಳಲ್ಲಿ ಬೇಸಿಗೆಯ ತಾಪಮಾನ ಅತಿಯಾಗಿ ಹೆಚ್ಚಾಗಿದ್ದರಿಂದ ಮೂವರೂ ಬಾಲಕರು ಮಧ್ಯಾಹ್ನದ ವೇಳೆ ಈಜಾಡಲು ಕರೆಮ್ಮನಕೆರೆಗೆ ತೆರಳಿದ್ದರು….

Read More

ಗೌಡಗೇರಿಯ ಜಮೀನಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಮತ್ತೊಂದು ಬಲಿ:

ಕುಂದಗೋಳ: ತಾಲ್ಲೂಕಿನಲ್ಲಿ ಹೆಸ್ಕಾಂ ಇಲಾಖೆಗೆ ಹಿಡಿದ ಗ್ರಹಣವೋ ಅಥವಾ ಕಳಂಕವೋ ತಿಳಿಯದಂತಾಗಿದ್ದು, ವಿದ್ಯುತ್ ಸ್ಪರ್ಶದಿಂದ ರೈತರೊಬ್ಬರು ದುರಂತ ಅಂತ್ಯ ಕಂಡಿರುವ ಘಟನೆ ತಾಲೂಕಿನ ಗೌಡಗೇರಿ ಗ್ರಾಮದಲ್ಲಿ ಸಂಭವಿಸಿದೆ. ಮೊನ್ನೆಯಷ್ಟೇ ಸಂಶಿ ಗ್ರಾಮದಲ್ಲಿ 06 ವರ್ಷದ ಮುಗ್ಧ ಬಾಲಕಿ ವಿದ್ಯುತ್ ತಾಗಿ ಮೃತಪಟ್ಟ ಘಟನೆ ಹಸಿರಾಗಿರುವಾಗಲೇ, ಇದೀಗ ಮತ್ತೊಂದು ಜೀವ ಬಲಿಯಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಗೌಡಗೇರಿ ಗ್ರಾಮದ ನಿವಾಸಿಯಾದ ಸುರೇಶ ಬಸಪ್ಪ ಮಣ್ಣೂರ (52) ಮೃತಪಟ್ಟ ದುರ್ದೈವಿ ರೈತರಾಗಿದ್ದಾರೆ. ಇವರು ಗ್ರಾಮದ ಸರ್ವೆ ನಂಬರ್…

Read More

ಬ್ಯಾಹಟ್ಟಿ ಗ್ರಾಮದಲ್ಲಿ ಸೌಹಾರ್ದಯುತವಾಗಿ ಜರುಗಿದ ಬಕ್ರೀದ್ ಹಬ್ಬ ಆಚರಣೆ

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಸಮಸ್ತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಭಕ್ತಿ, ಶಾಂತಿ ಹಾಗೂ ಸಹೋದರತ್ವದ ಸಂದೇಶದೊಂದಿಗೆ ಅತ್ಯಂತ ಸಂಭ್ರಮದಿಂದ ಆಚರಿಸಿದರು. ಬೆಳಗಿನ ಜಾವದಿಂದಲೇ ಗ್ರಾಮದಲ್ಲಿನ ಮಸೀದಿಗಳಲ್ಲಿ ವಿಶೇಷ ನಮಾಜ್ ನೆರವೇರಿಸಲಾಯಿತು. ಮುಸ್ಲಿಂ ಸಮುದಾಯದ ಹಿರಿಯರು, ಯುವಕರು ಹಾಗೂ ಮಕ್ಕಳು ಹೊಸ ವಸ್ತ್ರ ಧರಿಸಿ ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಹಬ್ಬದ ಸಂತಸ ಹಂಚಿಕೊಂಡರು. ಬಕ್ರೀದ್ ಹಬ್ಬವು ತ್ಯಾಗ, ಮಾನವೀಯತೆ ಮತ್ತು ದಾನಧರ್ಮದ ಪ್ರತೀಕವಾಗಿರುವ ಹಿನ್ನೆಲೆಯಲ್ಲಿ, ಈ ಸಂದರ್ಭದಲ್ಲಿ ಅಲ್ಲಾಹನ ಕೃಪೆಗೆ ಕೃತಜ್ಞತೆ ಸಲ್ಲಿಸಲಾಯಿತು….

Read More