ಸರ್ವೋತ್ತಮ ಸೇವಾ ಪ್ರಶಸ್ತಿ: ಅರ್ಜಿ ಸಲ್ಲಿಕೆಗೆ ಮಾರ್ಚ್ 4 ಕೊನೆಯ ದಿನ
ಧಾರವಾಡ: ರಾಜ್ಯ ಸರ್ಕಾರದ 2026ನೇ ಸಾಲಿನ ಪ್ರತಿಷ್ಠಿತ ‘ಸರ್ವೋತ್ತಮ ಸೇವಾ ಪ್ರಶಸ್ತಿ’ಗಾಗಿ ಅರ್ಹ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಮಾರ್ಚ್ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೇವೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಅಧಿಕಾರಿ ಮತ್ತು ನೌಕರರನ್ನು ಗುರುತಿಸಿ ಗೌರವಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ನಾಮನಿರ್ದೇಶನ ಪ್ರಕ್ರಿಯೆಯನ್ನು ಆರಂಭಿಸಿದೆ. ಜಿಲ್ಲಾ ಮಟ್ಟದಲ್ಲಿ ಈ ಪ್ರಕ್ರಿಯೆಯ ಸುಗಮ ನಿರ್ವಹಣೆಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ…

