ಅಂಬೇಡ್ಕರ್ ಮೂರ್ತಿಗೆ ಅವಮಾನ ಹಾಗೂ ದಲಿತರ ಮೇಲೆ ದೌರ್ಜನ್ಯ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಮನವಿ
ಹುಬ್ಬಳ್ಳಿ: ಶಿಗ್ಗಾಂವ ತಾಲೂಕಿನ ಹೊಸೂರು ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಗೆ ಅವಮಾನ ಎಸಗಿರುವ ಹಾಗೂ ದಲಿತರ ಮೇಲೆ ದೌರ್ಜನ್ಯ ನಡೆಸಿರುವ ಘಟನೆಯನ್ನು ಖಂಡಿಸಿ ‘ಜೈ ಭೀಮ ಯುವ ಶಕ್ತಿ ಸೇನಾ’ ಸಂಘಟನೆಯು ಶುಕ್ರವಾರ ಹುಬ್ಬಳ್ಳಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಹೊಸೂರು ಗ್ರಾಮದಲ್ಲಿ ಜನವರಿ 26 ರಂದು ರಾತ್ರಿ ಕಿಡಿಗೇಡಿಗಳು ಅಂಬೇಡ್ಕರ್ ಅವರ ಮೂರ್ತಿಗೆ ಸಗಣಿ ಬಳೆದು ವಿಕೃತಿ ಮೆರೆದಿದ್ದಾರೆ ಎಂದು ಸಂಘಟನೆಯು ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಅಸಮಾಧಾನ…

