​ಹುಬ್ಬಳ್ಳಿ: ಉಣಕಲ್ ಬಳಿ ಭೀಕರ ಅಪಘಾತ; ಬಿಆರ್‌ಟಿಎಸ್ ರಸ್ತೆಯಲ್ಲಿ ಚಿಗರಿ ಬಸ್-ಕಾರು ಮುಖಾಮುಖಿ ಡಿಕ್ಕಿ

​ಹುಬ್ಬಳ್ಳಿ: ನಗರದ ಉಣಕಲ್ ಬಳಿಯ ಬಿಆರ್‌ಟಿಎಸ್ (BRTS) ಕಾರಿಡಾರ್‌ನಲ್ಲಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಯಿಂದ ಧಾರವಾಡದ ಕಡೆಗೆ ತೆರಳುತ್ತಿದ್ದ ‘ಚಿಗರಿ’ ಬಸ್ ಹಾಗೂ ಎದುರುಗಡೆಯಿಂದ ಬರುತ್ತಿದ್ದ ನೆಕ್ಸಾನ್ ಕಾರಿನ ನಡುವೆ ಸಂಭವಿಸಿದ ಈ ಮುಖಾಮುಖಿ ಡಿಕ್ಕಿಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ​ಭಾನುವಾರ ಬೆಳಿಗ್ಗೆ ಈ ಅವಘಡ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಬಸ್ಸಿನ ಮುಂಭಾಗ ಜಖಂಗೊಂಡಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳಿಗೆ…

Read More

ಶೋಷಿತರ ಶೌರ್ಯದ ಸಂಕೇತ ಭೀಮಾ ಕೋರೆಗಾಂವ್ ವಿಜಯೋತ್ಸವ: ಮೇಯರ್ ಜ್ಯೋತಿ ಪಾಟೀಲ

ಹುಬ್ಬಳ್ಳಿ: ಭೀಮಾ ಕೋರೆಗಾಂವ್ ಯುದ್ಧವು ಭಾರತದ ಜಾತಿ ವ್ಯವಸ್ಥೆಯಲ್ಲಿ ನಲುಗಿಹೋದ ಶೋಷಿತ ಸಮುದಾಯವು ಶೌರ್ಯದಿಂದ ಜಯಿಸಿದ ಮಹಾನ್ ಹೋರಾಟವಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಜ್ಯೋತಿ ಪಾಟೀಲ ಅವರು ಬಣ್ಣಿಸಿದರು. ನಗರದ ಸಿದ್ಧಾರ್ಥ ಸರ್ಕಲ್‌ನಲ್ಲಿ ಸಮತಾ ಸೈನಿಕ ದಳ ಹಾಗೂ ಹುಬ್ಬಳ್ಳಿ-ಧಾರವಾಡ ವಿವಿಧ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ‘ಭೀಮಾ ಕೋರೆಗಾಂವ್ ವಿಜಯೋತ್ಸವ’ ಹಾಗೂ ಹಿರಿಯ ಮುಖಂಡ ಆಯುಷ್ಮಾನ್ ಪಿತಾಂಬರಪ್ಪ ಬಿಳಾರ ಅವರ 73ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. 1818ರ…

Read More

ಜ. 15ರ ನಂತರ ಸಂಪುಟ ಪುನರ್ ರಚನೆ ಚರ್ಚೆ; ಸಚಿವ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ ಸಲೀಂ ಅಹ್ಮದ್

​ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ಸಂಪುಟ ಪುನರ್ ರಚನೆಯ ಕುರಿತು ಜನವರಿ 15ರ ನಂತರ ಗಂಭೀರ ಚರ್ಚೆಗಳು ನಡೆಯುವ ಸಾಧ್ಯತೆಯಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು. ​ನಗರದಲ್ಲಿ ಆಯೋಜಿಸಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪುಟ ಪುನರ್ ರಚನೆಯ ವಿಷಯವಾಗಿ ಪಕ್ಷದ ವರಿಷ್ಠರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಸಂಪುಟದಲ್ಲಿರುವ ಸುಮಾರು ಶೇಕಡಾ 50ರಷ್ಟು ಸಚಿವರಿಗೆ ಪಕ್ಷದ ಸಂಘಟನೆಯ ಜವಾಬ್ದಾರಿ…

Read More

ಹೊಸ ವರ್ಷದ ಮೊದಲ ದಿನವೇ ಬೆಚ್ಚಿಬಿದ್ದ ಹುಬ್ಬಳ್ಳಿ: ಪತ್ನಿಯ ಕತ್ತು ಹಿಸುಕಿ ಕೊಂದ ಪತಿ

​ಹುಬ್ಬಳ್ಳಿ: ಹೊಸ ವರ್ಷದ ಸಂಭ್ರಮದ ನಡುವೆಯೇ ನಗರದ ನವಆನಂದನಗರದಲ್ಲಿ ಭೀಕರ ಕೊಲೆ ಪ್ರಕರಣವೊಂದು ವರದಿಯಾಗಿದ್ದು, ಕ್ಷುಲ್ಲಕ ಕಾರಣಕ್ಕಾಗಿ ಪತಿಯೇ ಪತ್ನಿಯ ಕತ್ತು ಹಿಸುಕಿ ಜೀವರಕ್ಷಕನಾಗಬೇಕಿದ್ದವನೇ ಹಂತಕನಾದ ಘಟನೆ ನಡೆದಿದೆ. ಅಂಜುಮ (33) ಕೊಲೆಯಾದ ದುರ್ದೈವಿ ಮಹಿಳೆಯಾಗಿದ್ದು, ಪತಿ ಮೆಹಬೂಬ್ ತನಿಬಂದ್ (36) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ​ನವಆನಂದನಗರದ ಮದೀನಿ ಮಸೀದಿ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಈ ದಂಪತಿ ಕಳೆದ ಒಂದು ತಿಂಗಳ ಹಿಂದಷ್ಟೇ ಇಲ್ಲಿಗೆ ವಾಸ್ತವ್ಯ ಬದಲಿಸಿದ್ದರು. ಆದರೆ, ಇವರ ನಡುವೆ ಪ್ರತಿದಿನವೂ ಕಿರಿಕಿರಿ ಹಾಗೂ…

Read More

ಮರ್ಯಾದೆಗೇಡು ಹತ್ಯೆ ತಡೆಗೆ ‘ಮಾನ್ಯಾ’ ಕಾಯ್ದೆ ತರಲು ಸರ್ಕಾರ ಚಿಂತನೆ: ಸಚಿವ ಎಚ್.ಸಿ. ಮಹದೇವಪ್ಪ

ಹುಬ್ಬಳ್ಳಿ: ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆಗಳಂತಹ ಅಮಾನವೀಯ ಕೃತ್ಯಗಳನ್ನು ತಡೆಯಲು ‘ಮಾನ್ಯಾ’ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆಯನ್ನು ಜಾರಿಗೆ ತರುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಲಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ಭರವಸೆ ನೀಡಿದರು. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮಕ್ಕೆ ಭೇಟಿ ನೀಡಿದ ಸಚಿವರು, ಇತ್ತೀಚೆಗೆ ಮರ್ಯಾದೆಗೇಡು ಹತ್ಯೆಗೆ ಬಲಿಯಾದ ಏಳು ತಿಂಗಳ ಗರ್ಭಿಣಿಯ ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಂತ ಕುಟುಂಬದವರಿಂದಲೇ ಈ ರೀತಿ…

Read More

ಗರ್ಭಿಣಿ ಯುವತಿಯ ಬರ್ಬರ ಹತ್ಯೆ ಖಂಡಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪಂಜಿನ ಮೆರವಣಿಗೆ: ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಹುಬ್ಬಳ್ಳಿ: ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಅಂತರ್ಜಾತಿ ವಿವಾಹವಾಗಿದ್ದ ಕಾರಣಕ್ಕೆ ಏಳು ತಿಂಗಳ ಗರ್ಭಿಣಿ ಯುವತಿಯನ್ನು ಆಕೆಯ ತಂದೆ ಮತ್ತು ಸಂಬಂಧಿಕರೇ ಸೇರಿ ಅಮಾನುಷವಾಗಿ ಹತ್ಯೆ ಮಾಡಿರುವುದನ್ನು ಖಂಡಿಸಿ, ಸೋಮವಾರ (ಡಿ. 28) ಸಂಜೆ ವಿವಿಧ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಸಲಾಯಿತು. ​ಮೇಲ್ಜಾತಿಯ ಯುವತಿಯು ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದನ್ನೇ ನೆಪವಾಗಿಸಿಕೊಂಡು ನಡೆದ ಈ ಘೋರ ಕೃತ್ಯವು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಈ ಪ್ರಕರಣದ ಆರೋಪಿಗಳನ್ನು ಕೇವಲ ಬಂಧಿಸಿದರೆ ಸಾಲದು,…

Read More

​ಅಂಚಟಗೇರಿ ಬಳಿ ಬಸ್-ಬೈಕ್ ಭೀಕರ ಅಪಘಾತ: ತಂದೆ ಮತ್ತು ಮಗು ಸ್ಥಳದಲ್ಲೇ ಸಾವು; ಮತ್ತೊಂದು ಮಗುವಿನ ಸ್ಥಿತಿ ಗಂಭೀರ

ಹುಬ್ಬಳ್ಳಿ: ತಾಲೂಕಿನ ಅಂಚಟಗೇರಿ ಗ್ರಾಮದ ಬಳಿ ಸಾರಿಗೆ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಹಾಗೂ ಎರಡು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಕಾರವಾರದಿಂದ ಹುಬ್ಬಳ್ಳಿಯತ್ತ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದ್ದು, ಮತ್ತೊಂದು ಮಗು ಸಾವು–ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ತಡಸ ಗ್ರಾಮದ ನಿವಾಸಿ ಮೆಹಬೂಬ ಖಾನ್ ಉಸ್ತಾದಿ (36) ಹಾಗೂ ಅವರ ಎರಡು ವರ್ಷದ…

Read More

ಇನಾಂ ವೀರಾಪುರ ಮರ್ಯಾದೆ ಹತ್ಯೆ ಪ್ರಕರಣ: ನೊಂದ ಕುಟುಂಬಕ್ಕೆ ಮಾವಳ್ಳಿ ಶಂಕರ್ ಸಾಂತ್ವನ; ಪ್ರತ್ಯೇಕ ಕಾಯ್ದೆ ರೂಪಿಸಲು ಆಗ್ರಹ

ಹುಬ್ಬಳ್ಳಿ: ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ದಲಿತ ಯುವಕನ ಪತ್ನಿಯ ಬರ್ಬರ ಹತ್ಯೆ ಹಾಗೂ ಯುವಕನ ಕುಟುಂಬದ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಅವರು ಸಂತ್ರಸ್ತ ಕುಟುಂಬಕ್ಕೆ ಸೋಮವಾರದಂದು ಭೇಟಿ ನೀಡಿ ಸಾಂತ್ವನ ಹೇಳಿದರು. ದೌರ್ಜನ್ಯಕ್ಕೊಳಗಾದ ಮರಿಯಪ್ಪ ದೊಡ್ಡಮನಿ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು, ಘಟನೆಯ ವಿವರಗಳನ್ನು ಪಡೆದು ನೊಂದವರಿಗೆ ಧೈರ್ಯ ತುಂಬಿದರು. ನಂತರ ಗ್ರಾಮದ ಮುಖಂಡರು ಹಾಗೂ ಸ್ಥಳದಲ್ಲಿದ್ದ…

Read More

ಇನಾಂ ವೀರಾಪುರ ಮರ್ಯಾದೆ ಹತ್ಯೆ ಖಂಡಿಸಿ ಹುಬ್ಬಳ್ಳಿಯಲ್ಲಿ ಚಲವಾದಿ ಮಹಾಸಭಾದಿಂದ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ದಲಿತ ಯುವಕನ ಪತ್ನಿಯ ಮರ್ಯಾದೆ ಹತ್ಯೆ ಹಾಗೂ ಯುವಕನ ಕುಟುಂಬದವರ ಮೇಲೆ ನಡೆದ ಭೀಕರ ಹಲ್ಲೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಚಲವಾದಿ ಮಹಾಸಭಾ ಧಾರವಾಡ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿಯ ಪ್ರಧಾನ ಅಂಚೆ ಕಚೇರಿ ಎದುರಿಗಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಪ್ರತಿಭಟನಾಕಾರರು, ನಂತರ ಪಾದಯಾತ್ರೆಯ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು….

Read More

ಹುಬ್ಬಳ್ಳಿಯಲ್ಲಿ ಅದ್ಧೂರಿ ‘ಸಂಗಮ ಸಿರಿ’ ಪ್ರಶಸ್ತಿ ಪ್ರಧಾನ ಸಮಾರಂಭ: ಡಾ. ಶಶಿಕಾಂತ ಪಟ್ಟಣ ಅವರಿಗೆ ಗೌರವ

ಹುಬ್ಬಳ್ಳಿ: ವಚನ ಸಾಹಿತ್ಯ ಇಂದಿಗೂ ಜೀವಂತವಾಗಿದೆ. ವಚನಗಳಂತೆ ಬದುಕನ್ನು ರೂಪಿಸಿಕೊಳ್ಳಬೇಕು. ರಾಜಕಾರಣ ಸೃಷ್ಟಿಸುತ್ತಿರುವ ಜಾತಿ ಮತ್ತು ಧರ್ಮಗಳ ಕಿತ್ತಾಟದಿಂದ ದೂರವಿರಬೇಕು ಎಂದು ಆಕಾಶವಾಣಿಯ ನಿವೃತ್ತ ನಿರ್ದೇಶಕ ಡಾ. ಬಸವರಾಜ ಸಾದರ ಹೇಳಿದರು. ರವಿವಾರ ನಗರದ ಪಿ.ಸಿ. ಜಾಬಿನ್ ವಿಜ್ಞಾನ ಮಹಾವಿದ್ಯಾಲಯದ ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಿದ್ದ ಡಾ. ಸಂಗಮೇಶ ಹಂಡಗಿ ಸಾಹಿತ್ಯ ಪ್ರತಿಷ್ಠಾನದ ವತಿಯಿಂದ ನೀಡಲಾದ ರಾಜ್ಯಮಟ್ಟದ ‘ಸಂಗಮ ಸಿರಿ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಡಾ. ಸಂಗಮೇಶ ಹಂಡಗಿ ಹಾಗೂ ಅವರ ತಲೆಮಾರಿನವರು ಆದರ್ಶ ಬದುಕು ಸಾಗಿಸಿದ್ದಾರೆ….

Read More