ರಸ್ತೆ ಅಭಿವೃದ್ಧಿ ವೇಳೆ ತೆರವುಗೊಳಿಸಿದ ‘ಶಿವಲಿಂಗಪ್ಪ ಅಗಡಿ ಮಾರ್ಗ’ ನಾಮಫಲಕ ಮರುಸ್ಥಾಪನೆಗೆ ಒತ್ತಾಯ
ಹುಬ್ಬಳ್ಳಿ, ಜ. 14: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮೇಯರ್ ದಿ. ಶಿವಲಿಂಗಪ್ಪ ಗುರುಸಿದ್ಧಪ್ಪ ಅಗಡಿ ಅವರ ಹೆಸರಿನ ರಸ್ತೆ ನಾಮಫಲಕಗಳನ್ನು, ರಸ್ತೆ ಕಾಮಗಾರಿ ಪೂರ್ಣಗೊಂಡ ನಂತರ ಶೀಘ್ರವಾಗಿ ಮರುಸ್ಥಾಪಿಸುವಂತೆ ಅಗಡಿ ಕುಟುಂಬಸ್ಥರು ಹಾಗೂ ವಾರ್ಡಿನ ನಾಗರಿಕರು ಮಹಾನಗರ ಪಾಲಿಕೆಗೆ ಒತ್ತಾಯಿಸಿದ್ದಾರೆ. ಈ ಕುರಿತು ಮೇಯರ್ ಹಾಗೂ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ ಅವರು, ಶಿವಲಿಂಗಪ್ಪ ಅಗಡಿ ಅವರು ಎರಡು ಅವಧಿಗೆ ಕಾರ್ಪೊರೇಟರ್ ಆಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಹಾಗೂ ಮೇಯರ್ ಆಗಿ ಸಲ್ಲಿಸಿದ ನಿಷ್ಠಾವಂತ ಸೇವೆಯನ್ನು…

