ಹುಬ್ಬಳ್ಳಿ: ಬಿಜೆಪಿ ಮಹಿಳಾ ಕಾರ್ಯಕರ್ತೆಯ ಮೇಲೆ ಪೊಲೀಸ್ ದರ್ಪದ ಆರೋಪ; ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಕ್ಕೆ ಆಕ್ರೋಶ
ಹುಬ್ಬಳ್ಳಿ: ನಗರದ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯೊಬ್ಬರನ್ನು ವಿವಸ್ತ್ರಗೊಳಿಸಿ, ಅಮಾನುಷವಾಗಿ ಥಳಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರ ಈ ಅಮಾನುಷ ಕೃತ್ಯಕ್ಕೆ ಎಲ್ಲೆಡೆ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದು, ಕಾನೂನು ಸುವ್ಯವಸ್ಥೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ. ಮಾಜಿ ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದು ಇತ್ತೀಚೆಗೆ ಬಿಜೆಪಿ ಸೇರಿದ್ದ ಸುಜಾತಾ (ಅಲಿಯಾಸ್ ವಿಜಯಲಕ್ಷ್ಮಿ) ಹಂಡಿ ಎಂಬುವವರೇ ಪೊಲೀಸರ ಈ ದೌರ್ಜನ್ಯಕ್ಕೆ ಒಳಗಾದವರು ಎನ್ನಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಸುಜಾತಾ…

