ಸಿಎಂ ಕುರ್ಚಿ ಕಾಳಗ’ದಿಂದ ಆಡಳಿತಕ್ಕೆ ಹಾನಿ: “ಕಾಂಗ್ರೆಸ್ ಆಡಳಿತ ಅಸಹಾಯಕ”- ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕೆ

​: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಹುದ್ದೆಯ ವಿವಾದವನ್ನು ಪರಿಹರಿಸಲು ಕಾಂಗ್ರೆಸ್ ಹೈಕಮಾಂಡ್ “ಅಸಹಾಯಕವಾಗಿದೆ” ಎಂದು ತೀವ್ರವಾಗಿ ಟೀಕಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ಶ್ರೀ ಹನುಮಂತ ದೇವಸ್ಥಾನದಲ್ಲಿ ನೇರಪ್ರಸಾರ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಆಡಳಿತ ವೈಫಲ್ಯದ ಬಗ್ಗೆ ವಾಗ್ದಾಳಿ ನಡೆಸಿದರು. ​ಆಡಳಿತ ಮತ್ತು ಭ್ರಷ್ಟಾಚಾರದ ಕುರಿತು ಟೀಕೆ: ​ಮುಖ್ಯಮಂತ್ರಿ ಕುರ್ಚಿಗಾಗಿ ನಡೆದ ಹೋರಾಟವು ರಾಜ್ಯದ ಆಡಳಿತಕ್ಕೆ ಹಾನಿ ಮಾಡುತ್ತಿದ್ದು,…

Read More

“ಆಕಳ ಹಾಲು ಅಮೃತಕ್ಕೆ ಸಮಾನ; ಹೊಟ್ಟೆಯಲ್ಲಿ ಹಚ್ಚೇರು ಬಂಗಾರ ಸತ್ಯ”: ಕಾಡಸಿದ್ದೇಶ್ವರ ಸ್ವಾಮೀಜಿ

ಹುಬ್ಬಳ್ಳಿ: ದೇಸಿ ಆಕಳ ಹಾಲು ಅಮೃತಕ್ಕೆ ಸಮಾನವಾಗಿದ್ದು, ಅದರ ಹಾಲು ಮತ್ತು ತುಪ್ಪವನ್ನು ಸೇವಿಸಿದರೆ ಮನುಷ್ಯ ಆರೋಗ್ಯವಂತನಾಗಿರುತ್ತಾನೆ ಎಂದು ಕೊಲ್ಲಾಪುರದ ಕಣ್ಣೇರಿ ಮಠದ ಶ್ರೀ ಕಾಡಸಿದ್ದೇಶ್ವರ ಮಹಾಸ್ವಾಮಿಗಳು ಅಭಿಪ್ರಾಯಪಟ್ಟಿದ್ದಾರೆ. ಜವಾರಿ ಆಕಳ ತುಪ್ಪದಲ್ಲಿ ಹೆಚ್ಚಿನ ಔಷಧಿ ಗುಣಗಳಿದ್ದು ಅನೇಕ ಕಾಯಿಲೆಗಳು ವಾಸಿಯಾಗುತ್ತವೆ. ಮಕ್ಕಳಿಗೆ ಕಿವಿ ನೋವು ಅಥವಾ ತಲೆನೋವು ಕಾಣಿಸಿಕೊಂಡಾಗ ಜವಾರಿ ಆಕಳ ತುಪ್ಪವನ್ನು ಎರಡು ಹನಿಗಳಂತೆ ನಾಲ್ಕು ದಿನ ಹಾಕಿದರೆ ಅವರು ನೋವಿನಿಂದ ಪಾರಾಗುತ್ತಾರೆ ಎಂದು ಸ್ವಾಮೀಜಿಗಳು ತಿಳಿಸಿದರು. ಆಕಳ ಹೊಟ್ಟೆಯಲ್ಲಿ ಹಚ್ಚೇರು ಬಂಗಾರ ಸತ್ಯ…

Read More

ಅವಳಿ ನಗರ: ಸಂಘಟಿತ ಅಪರಾಧಗಳಲ್ಲಿ ತೊಡಗಿದ್ದ 26 ಆರೋಪಿಗಳ ಗಡಿಪಾರು

ಹುಬ್ಬಳ್ಳಿ-ಧಾರವಾಡ: ಸಂಘಟಿತ ಅಪರಾಧ, ಮಾದಕ ವಸ್ತುಗಳ ಸಾಗಣೆ (NDPS) ಪ್ರಕರಣಗಳು ಮತ್ತು ಇನ್ನಿತರ ಗಂಭೀರ ಅಪರಾಧ ಚಟುವಟಿಕೆಗಳಲ್ಲಿ ನಿರತರಾಗಿದ್ದ ಒಟ್ಟು 26 ವ್ಯಕ್ತಿಗಳನ್ನು ಹುಬ್ಬಳ್ಳಿ-ಧಾರವಾಡ ನಗರ ವ್ಯಾಪ್ತಿಯಿಂದ ವಿವಿಧ ಜಿಲ್ಲೆಗಳಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಅವಳಿ ನಗರದ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಅವರು ಮಾಹಿತಿ ನೀಡಿದ್ದಾರೆ. ​ನಗರದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೈಗೊಂಡಿರುವ ಮಹತ್ವದ ಕ್ರಮ ಇದಾಗಿದೆ. ಗಡಿಪಾರು ಮಾಡಲಾದ ಈ ವ್ಯಕ್ತಿಗಳು ನಗರದ ಅಪರಾಧ…

Read More

ಹುಬ್ಬಳ್ಳಿ: ಚಿನ್ನ ದೋಚಿದ್ದ ಪ್ರಕರಣ; ಇಬ್ಬರು ಪಿಎಸ್‌ಐಗಳು ಅರೆಸ್ಟ್, ಕೋಟ್ಯಂತರ ರೂ. ಮೌಲ್ಯದ ಚಿನ್ನ ವಶ!

​ಹುಬ್ಬಳ್ಳಿ: ನಗರದಲ್ಲಿ ಇತ್ತೀಚೆಗೆ ನಡೆದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ಮತ್ತು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್ ಇಲಾಖೆಯ ಇಬ್ಬರು ಸಬ್ ಇನ್‌ಸ್ಪೆಕ್ಟರ್‌ಗಳನ್ನು (ಪಿಎಸ್‌ಐ) ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ದಿಗ್ಭ್ರಮೆಗೊಳಿಸುವ ಘಟನೆ ಪೊಲೀಸ್ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ​ಕೇರಳ ಮೂಲದ ಆಭರಣ ವ್ಯಾಪಾರಿಯೊಬ್ಬರಿಂದ ಸುಮಾರು ಮೂರು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನ ಮತ್ತು ನಗದನ್ನು ದೋಚಿದ್ದ ಪ್ರಕರಣದಲ್ಲಿ, ಇದೇ ಇಬ್ಬರು ಪಿಎಸ್‌ಐಗಳ ಪಾತ್ರ ದೃಢಪಟ್ಟಿದೆ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ….

Read More

ಬಸನಗೌಡ ಯತ್ನಾಳರಿಂದ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ: ‘ಸಿಎಂ ಖುರ್ಚಿಗಾಗಿ ದೆಹಲಿಗೆ ದೌಡು, ಜನಕಲ್ಯಾಣ ಮರೆತಿದ್ದಾರೆ’

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಸಿಎಂ ಕುರ್ಚಿ ಮತ್ತು ಸಚಿವ ಸ್ಥಾನಗಳಿಗಾಗಿ ಕಳೆದ ಒಂದು ತಿಂಗಳಿನಿಂದ ದೆಹಲಿಗೆ ದೌಡಾಯಿಸುತ್ತಿದ್ದಾರೆ. ತಮ್ಮ ಸ್ವಾರ್ಥ ಸಾಧನೆ ಹಾಗೂ ಸಂಖ್ಯಾಬಲ ಪ್ರದರ್ಶನದ ತವಕದಲ್ಲಿರುವ ನಾಯಕರು, ಜನಕಲ್ಯಾಣವನ್ನು ಸಂಪೂರ್ಣವಾಗಿ ಮರೆತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಮತ್ತು ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ​ನಗರದಲ್ಲಿ (ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಅಪ್ರಬುದ್ಧ ಮಂತ್ರಿಗಳು ಹಿಂದೂ ವಿರೋಧಿ ಹೇಳಿಕೆಗಳನ್ನು ನೀಡುವುದನ್ನಷ್ಟೇ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಪ್ರವಾಹ, ಅತೀವೃಷ್ಟಿ,…

Read More

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಪ್ರಕಾಶ ಬುರಬುರೆ ರಾಜೀನಾಮೆ

ಹುಬ್ಬಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರ ಮಂಡಲ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಕೆ ​ಹುಬ್ಬಳ್ಳಿ: ನವೆಂಬರ್ 23, 2025: ​ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಾಥಮಿಕ ಸದಸ್ಯತ್ವಕ್ಕೆ ಪ್ರಕಾಶ ಮೋತಿಲಾಲಸಾ ಬುರಬುರೆ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಹುಬ್ಬಳ್ಳಿ ನಿವಾಸಿಗಳಾಗಿರುವ ಪ್ರಕಾಶ ಬುರಬುರೆ ಅವರು, ತಮ್ಮ ರಾಜೀನಾಮೆ ಪತ್ರವನ್ನು ಇಂದು (ನವೆಂಬರ್ 23, 2025) ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ ಅವರಿಗೆ ಮತ್ತು ಹುಬ್ಬಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರದ ಮಂಡಲ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ….

Read More

ಮೆಕ್ಕೆಜೋಳಕ್ಕೆ ಕ್ವಿಂಟಲ್‌ಗೆ ₹3,000 ನಿಗದಿ, ಖರೀದಿ ಕೇಂದ್ರಕ್ಕೆ ಒತ್ತಾಯಿಸಿ ನ. ನಾಳೆ(AIKKMS) ನಿಂದ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ರೈತರ ಎಲ್ಲ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆಗೆ ಆಗ್ರಹ ​ಹುಬ್ಬಳ್ಳಿ: ನವೆಂಬರ್ 23, 2025: ರೈತ ವಿರೋಧಿ ನೀತಿಗಳ ವಿರುದ್ಧ ಸಮರ ಸಾರಿರುವ ಅಖಿಲ ಭಾರತ ಕಿಸಾನ್ ಖೇತ್ ಮಜ್ದೂರ್ ಸಂಘಟನೆ (AIKKMS), ರೈತರ ಮೆಕ್ಕೆಜೋಳಕ್ಕೆ ಕೂಡಲೇ ಖರೀದಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಕ್ವಿಂಟಲ್‌ಗೆ ಕನಿಷ್ಠ ರೂ. 3,000 ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ​ಧಾರವಾಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಈ ಪ್ರತಿಭಟನೆಯು ನಾಳೆ, ಅಂದರೆ ನವೆಂಬರ್ 24, 2025…

Read More

6ನೇ ಡ್ರೈವ್ ಯಶಸ್ವಿ: ಹುಬ್ಬಳ್ಳಿ-ಧಾರವಾಡದಲ್ಲಿ 129 ಡ್ರಗ್ಸ್ ಬಳಕೆದಾರರ ವಿರುದ್ಧ FIR ದಾಖಲು

​ಹುಬ್ಬಳ್ಳಿ-ಧಾರವಾಡ: ಅವಳಿ ನಗರವನ್ನು ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡುವ ಗುರಿಯೊಂದಿಗೆ ಪೊಲೀಸ್ ಇಲಾಖೆಯ ಕಮಿಷನರ್ ಎನ್. ಶಶಿಕುಮಾರ್ ಮತ್ತು ಅವರ ತಂಡವು ಶುಕ್ರವಾರದಂದು (ನ. 21) 6ನೇ ಬಾರಿಗೆ ಬೃಹತ್ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿದೆ. ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ವಿಶೇಷ ಕಾರ್ಯಾಚರಣೆ ಕೈಗೊಂಡು 334ಕ್ಕೂ ಹೆಚ್ಚು ಶಂಕಿತ ಡ್ರಗ್ಸ್ ಬಳಕೆದಾರರನ್ನು ವಶಕ್ಕೆ ಪಡೆಯಲಾಯಿತು. ​ಈ ಶಂಕಿತರಿಗೆ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆ ಮತ್ತು ಧಾರವಾಡದ ಡಿಮ್ಹಾನ್ಸ್ (DHARWAD DIMHANS) ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ…

Read More

ಹುಬ್ಬಳ್ಳಿ ವಿಮಾನ ನಿಲ್ದಾಣದ ಪಾರ್ಕಿಂಗ್ ಗುತ್ತಿಗೆ: ಹೊಸ ದರಗಳು, ನಿಯಮಗಳು ಜಾರಿ

📰 ಹುಬ್ಬಳ್ಳಿ ವಿಮಾನ ನಿಲ್ದಾಣದ ಪಾರ್ಕಿಂಗ್ ಗುತ್ತಿಗೆ: ಹೊಸ ದರಗಳು, ನಿಯಮಗಳು ಜಾರಿ ಹುಬ್ಬಳ್ಳಿ:ಇಲ್ಲಿಯವರೆಗೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ತನ್ನ ಸಿಬ್ಬಂದಿಯ ಮೂಲಕ ನೇರವಾಗಿ ನಿರ್ವಹಿಸುತ್ತಿದ್ದ ಹುಬ್ಬಳ್ಳಿ ವಿಮಾನ ನಿಲ್ದಾಣದ ಪಾರ್ಕಿಂಗ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. AAI ಇದೀಗ ಹೊಸ ಟೆಂಡರ್ ಮೂಲಕ ಪಾರ್ಕಿಂಗ್ ಕಾರ್ಯಾಚರಣೆಯ ಜವಾಬ್ದಾರಿಯನ್ನು M/s Om Sai Siddhi ಸಂಸ್ಥೆಗೆ ಹಸ್ತಾಂತರಿಸಿದೆ. ಹೊಸ ಗುತ್ತಿಗೆ ಜಾರಿಗೆ ಬಂದಿರುವುದರಿಂದ ವಿಮಾನ ನಿಲ್ದಾಣದ ಆಡಳಿತವು ಪಾರ್ಕಿಂಗ್ ಶುಲ್ಕಗಳ ಹೊಸ ಪರಿಷ್ಕೃತ ಚಾರ್ಟ್ ಅನ್ನು…

Read More

ದರ ಹೆಚ್ಚಳಕ್ಕೆ ಆಗ್ರಹಿಸಿ ನ. 12 ರಿಂದ ಹುಬ್ಬಳ್ಳಿಯಲ್ಲಿ ಜೆಸಿಬಿ ಕಾರ್ಯಾಚರಣೆ ಸ್ಥಗಿತ: ಮಾಲೀಕರ ಸಂಘದಿಂದ ಐದು ದಿನಗಳ ಹೋರಾಟ

ಹುಬ್ಬಳ್ಳಿ: ಜೆಸಿಬಿ ಕಾರ್ಯಾಚರಣೆಯ ದರವನ್ನು ಹೆಚ್ಚಿಸಬೇಕು ಮತ್ತು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ, ಹುಬ್ಬಳ್ಳಿ ಜೆಸಿಬಿ ಮಾಲೀಕರ ಸಂಘ (ರಿ.)ವು ನವೆಂಬರ್ 12 ರಿಂದ 16 ರವರೆಗೆ ಐದು ದಿನಗಳ ಕಾಲ ನಗರ ವ್ಯಾಪ್ತಿಯಲ್ಲಿ ಜೆಸಿಬಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿ ಹೋರಾಟ ನಡೆಸಲು ನಿರ್ಧರಿಸಿದೆ. ಈ ಕುರಿತು ಸಂಘದ ಅಧ್ಯಕ್ಷ ಅಮರನಾಥ ಜಗಳೂರ ಅವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜೆಸಿಬಿ ಯಂತ್ರಗಳ ಬಿಡಿಭಾಗಗಳ ದರ, ಎಣ್ಣೆ (ಆಯಿಲ್) ಮತ್ತು ಡೀಸೆಲ್…

Read More