ಇನಾಂ ವೀರಾಪುರ ಮರ್ಯಾದೆ ಹತ್ಯೆ ಖಂಡಿಸಿ ಹುಬ್ಬಳ್ಳಿಯಲ್ಲಿ ಚಲವಾದಿ ಮಹಾಸಭಾದಿಂದ ಬೃಹತ್ ಪ್ರತಿಭಟನೆ
ಹುಬ್ಬಳ್ಳಿ: ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ದಲಿತ ಯುವಕನ ಪತ್ನಿಯ ಮರ್ಯಾದೆ ಹತ್ಯೆ ಹಾಗೂ ಯುವಕನ ಕುಟುಂಬದವರ ಮೇಲೆ ನಡೆದ ಭೀಕರ ಹಲ್ಲೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಚಲವಾದಿ ಮಹಾಸಭಾ ಧಾರವಾಡ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿಯ ಪ್ರಧಾನ ಅಂಚೆ ಕಚೇರಿ ಎದುರಿಗಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಪ್ರತಿಭಟನಾಕಾರರು, ನಂತರ ಪಾದಯಾತ್ರೆಯ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು….

