ಹುಬ್ಬಳ್ಳಿಯಲ್ಲಿ ಅದ್ಧೂರಿ ‘ಸಂಗಮ ಸಿರಿ’ ಪ್ರಶಸ್ತಿ ಪ್ರಧಾನ ಸಮಾರಂಭ: ಡಾ. ಶಶಿಕಾಂತ ಪಟ್ಟಣ ಅವರಿಗೆ ಗೌರವ
ಹುಬ್ಬಳ್ಳಿ: ವಚನ ಸಾಹಿತ್ಯ ಇಂದಿಗೂ ಜೀವಂತವಾಗಿದೆ. ವಚನಗಳಂತೆ ಬದುಕನ್ನು ರೂಪಿಸಿಕೊಳ್ಳಬೇಕು. ರಾಜಕಾರಣ ಸೃಷ್ಟಿಸುತ್ತಿರುವ ಜಾತಿ ಮತ್ತು ಧರ್ಮಗಳ ಕಿತ್ತಾಟದಿಂದ ದೂರವಿರಬೇಕು ಎಂದು ಆಕಾಶವಾಣಿಯ ನಿವೃತ್ತ ನಿರ್ದೇಶಕ ಡಾ. ಬಸವರಾಜ ಸಾದರ ಹೇಳಿದರು. ರವಿವಾರ ನಗರದ ಪಿ.ಸಿ. ಜಾಬಿನ್ ವಿಜ್ಞಾನ ಮಹಾವಿದ್ಯಾಲಯದ ಸೆಮಿನಾರ್ ಹಾಲ್ನಲ್ಲಿ ಆಯೋಜಿಸಿದ್ದ ಡಾ. ಸಂಗಮೇಶ ಹಂಡಗಿ ಸಾಹಿತ್ಯ ಪ್ರತಿಷ್ಠಾನದ ವತಿಯಿಂದ ನೀಡಲಾದ ರಾಜ್ಯಮಟ್ಟದ ‘ಸಂಗಮ ಸಿರಿ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಡಾ. ಸಂಗಮೇಶ ಹಂಡಗಿ ಹಾಗೂ ಅವರ ತಲೆಮಾರಿನವರು ಆದರ್ಶ ಬದುಕು ಸಾಗಿಸಿದ್ದಾರೆ….

