ಮಕ್ಕಳ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಪೋಷಕ–ಶಿಕ್ಷಕರ ಮಹಾಸಭೆ ಯಶಸ್ವಿ: ಜವಾಬ್ದಾರಿ ಹಂಚಿಕೆಗೆ ಡಿಸಿ ಕರೆ
ಜಿಲ್ಲಾ ಮಟ್ಟದ ಪೋಷಕ–ಶಿಕ್ಷಕರ ಮಹಾಸಭೆ ಯಶಸ್ವಿಯಾಗಿ ನೆರವೇರಿತು ಹುಬ್ಬಳ್ಳಿ ನ.14: ಪ್ರಸಕ್ತ ಸಾಲಿನ ಮಕ್ಕಳ ದಿನಾಚರಣೆಯನ್ನು ರಾಜ್ಯ ಸರ್ಕಾರದ ಸೂಚನೆಯಂತೆ ಪೋಷಕರಲ್ಲಿ ಮತ್ತು ಶಿಕ್ಷಕರಲ್ಲಿ ಜಾಗೃತಿ ಮೂಡಿಸಿ, ಅವರ ಜವಾಬ್ದಾರಿಯನ್ನು ನೆನಪಿಸುವ ಉದ್ದೇಶದಿಂದ ಇಂದು ಜಿಲ್ಲೆಯಾದ್ಯಂತ 896 ಶಾಲೆ ಮತ್ತು ಕಾಲೇಜುಗಳಲ್ಲಿ ಪೋಷಕ–ಶಿಕ್ಷಕರ ಮಹಾಸಭೆಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ತಿಳಿಸಿದ್ದಾರೆ. ರಾಯನಾಳ ಗ್ರಾಮದ ಕೆಪಿಎಸ್ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ರಾಯನಾಳ ಗ್ರಾಮ ಪಂಚಾಯತ್, ಕರ್ನಾಟಕ ಪಬ್ಲಿಕ್…

