ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಸಿಪಿಐ ಚಿಕ್ಕರಾಜ್ ಶೆಟ್ಟಿ,ರಾಮಪುರದಲ್ಲಿ ಅದ್ದೂರಿ ವಾಲಿಬಾಲ್ ಪಂದ್ಯಾವಳಿ: ವಿಜೇತರಿಗೆ ಬಹುಮಾನ ವಿತರಣೆ

ಹನೂರು: ಯುವಕರು ದುಶ್ಚಟಗಳು ಹಾಗೂ ಮಾದಕ ದ್ರವ್ಯ ಸೇವನೆಯಿಂದ ದೂರವಿದ್ದು, ಕ್ರೀಡೆಗಳತ್ತ ಗಮನ ಹರಿಸಿದರೆ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದು ರಾಮಪುರ ವೃತ್ತ ನಿರೀಕ್ಷಕ ಚಿಕ್ಕರಾಜ್ ಶೆಟ್ಟಿ ಕಿವಿಮಾತು ಹೇಳಿದರು. ​ತಾಲೂಕಿನ ರಾಮಪುರ ಗ್ರಾಮದ ಇಂದಿರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶ್ರೀ ಬೈಯ್ಯಮ್ಮ ತಾಯಿ ಹಾಗೂ ಆಂಜನೇಯ ಸ್ವಾಮಿ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಪ್ರಥಮ ವರ್ಷದ ವಾಲಿಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು….

Read More

ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಮೃತರ ಕುಟುಂಬಕ್ಕೆ ಮಾಜಿ ಶಾಸಕ ಆರ್. ನರೇಂದ್ರ ಸಾಂತ್ವನ, ಪರಿಹಾರ ವಿತರಣೆ

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯಲ್ಲಿ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕರ ಕುಟುಂಬಸ್ಥರನ್ನು ಮಾಜಿ ಶಾಸಕ ಆರ್. ನರೇಂದ್ರ ಅವರು ಭೇಟಿಯಾಗಿ ಸಾಂತ್ವನ ಹೇಳಿದರು. ಹನೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಗಾರದ ಆವರಣದಲ್ಲಿ ಮೃತರ ಕುಟುಂಬಕ್ಕೆ ಸಾರಿಗೆ ನಿಗಮದ ವತಿಯಿಂದ ನೀಡಲಾದ ಮೊದಲ ಹಂತದ ಪರಿಹಾರದ ಮೊತ್ತವಾದ ಇಪ್ಪತೈದು ಸಾವಿರ ರೂಪಾಯಿಗಳನ್ನು ಇದೇ ವೇಳೆ ಹಸ್ತಾಂತರಿಸಿದರು. ​ಬಳಿಕ ಮಾತನಾಡಿದ ಅವರು, ಸಾರಿಗೆ ನಿಗಮದ ಅಧಿಕಾರಿಗಳ ಮೂಲಕ ಮೃತರ ಕುಟುಂಬಕ್ಕೆ ತಕ್ಷಣದ ನೆರವು…

Read More

ಸಹಕಾರ ಸಂಘಗಳಿಗೆ ಸ್ವಾಯತ್ತತೆ, ಹಾಲಿಗೆ ₹5 ಸಹಾಯಧನ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಗ್ರಾಮಕ್ಕೊಂದು ಶಾಲೆ, ಗ್ರಾಮ ಪಂಚಾಯಿತಿ ಮತ್ತು ಸಹಕಾರ ಸಂಘ ಅತ್ಯಗತ್ಯ ಎಂಬುದು ಜವಾಹರಲಾಲ್ ನೆಹರೂ ಅವರ ದೂರದೃಷ್ಟಿಯಾಗಿತ್ತು. ಅವರ ಈ ದೃಷ್ಟಿಯ ಫಲವಾಗಿಯೇ ಇಂದು ದೇಶದಲ್ಲಿ ಸಹಕಾರಿ ಚಳವಳಿಯು ಗಟ್ಟಿಯಾಗಿ ಬೆಳೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಚಾಮರಾಜನಗರದಲ್ಲಿ ಗುರುವಾರದಂದು ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನೆಹರೂ ಅವರ ಜನ್ಮದಿನದಂದೇ ಪ್ರತಿ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತಿರುವುದನ್ನು ಸ್ಮರಿಸಿದ…

Read More